Webdunia - Bharat's app for daily news and videos

Install App

ಕಾವೇರಿ ಬರಪೀಡಿತ ಪ್ರದೇಶ ಘೋಷಣೆ: ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ ತಮಿಳುನಾಡು

Webdunia
ಬುಧವಾರ, 26 ಅಕ್ಟೋಬರ್ 2016 (18:24 IST)
ಕಾವೇರಿ ವಿಚಾರದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಸರಕಾರ, ಕಾವೇರಿ ಜಲಾನಯನ ಪ್ರದೇಶದಲ್ಲಿನ 42 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಕರ್ನಾಟಕ ಸರಕಾರ ಘೋಷಣೆ ಮಾಡಿರುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. 
ಕಾವೇರಿ ಜಲಾನಯನ ಪ್ರದೇಶದ ಒಟ್ಟು 48 ತಾಲೂಕುಗಳ ಪೈಕಿ 42 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದೆಯೆಂದು ಅಕ್ಟೋಬರ್ 17 ರಂದು ಕೇಂದ್ರ ತಜ್ಞರ ತಂಡ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿತ್ತು. ಆದರೆ, ಕರ್ನಾಟಕದ ಹೇಳಿಕೆಯನ್ನು ತಮಿಳುನಾಡು ಒಪ್ಪಿಕೊಂಡಿಲ್ಲ. 
 
ಮುಂಗಾರು ಬೆಳೆ ಅವಧಿಯಲ್ಲಿ 193 ಟಿಎಂಸಿ ನೀರು ಬಳಸಿಕೊಳ್ಳಲು ಕರ್ನಾಟಕಕ್ಕೆ ಅವಕಾಶ ಇದೆ. ಈಗಾಗಲೇ ಕರ್ನಾಟಕ 112 ಟಿಎಂಸಿ ನೀರನ್ನು ನೀರಾವರಿಗೆ ಹಾಗೂ 12 ಟಿಎಂಸಿ ನೀರನ್ನು ಕುಡಿಯಲು ಬಳಸಿಕೊಂಡಿದೆ. ಹಾಗೂ ನೀರಾವರಿಗಾಗಿ ಇನ್ನೂ 36.38 ಟಿಎಂಸಿ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದೆ. ಇದರೊಂದಿಗೆ ಕರ್ನಾಟಕ ನೀರಾವರಿಗಾಗಿ 149 ಟಿಎಂಸಿ ನೀರು ಬಳಸಿಕೊಂಡತ್ತಾಗುತ್ತದೆ. ಹೀಗಾಗಿ ಕಾವೇರಿ ಕೊಳ್ಳದ ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಕರ್ನಾಟಕ ಸರಕಾರ ಘೋಷಿಸಿದ್ದು ಸರಿಯಲ್ಲ ಎಂದು ತಮಿಳುನಾಡು ಸರಕಾರ ಸುಪ್ರೀಂಕೋರ್ಟ್ ತಕರಾರು ಸಲ್ಲಿಸಿದೆ. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments