Webdunia - Bharat's app for daily news and videos

Install App

ಬ್ಯಾಟರಿ ಬೆಳಕಲ್ಲಿ ಬರ ಅಧ್ಯಯನ ನಡೆಸಿದರು, ರೈತರ ಆಕ್ರೋಶಕ್ಕೆ ಕಾರಣರಾದರು

Webdunia
ಶನಿವಾರ, 5 ನವೆಂಬರ್ 2016 (10:11 IST)
ದಾವಣಗೆರೆ: ಮೊದಲೇ ಬರದಿಂದ ರೈತರು ಕೆಂಗೆಟ್ಟು ಹೋಗಿದ್ದರು. ಕೇಂದ್ರ ಬರ ಅಧ್ಯಯನ ತಂಡವತಮ್ಮ ಅಳಲನ್ನು ಆಲಿಸುತ್ತದೆ ಎಂದು ಮುಂಜಾನೆಯಿಂದ ಕಾದು ಕುಳಿತಿದ್ದರು‌. ಆದರೆ, ತಂಡ ಬಂದಿದ್ದು ಕತ್ತಲಾವರಿಸಿದ ಬಳಿಕ.
ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದ ರೈತರ ಹೊಲಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಶುಕ್ರವಾರ ರಾತ್ರಿ 6.39ರ ವೇಳೆ ಭೇಟಿ ನೀಡತ್ತು. ಬ್ಯಾಟರಿ ಬೆಳಕಿನಲ್ಲಿ ಬೆಳೆ ಹಾನಿ ವೀಕ್ಷಿಸಿ, ಕಾಟಾಚಾರಕ್ಕೆಂಬಂತೆ ಒಂದಿಬ್ಬರುವ ರೈತರನ್ನು ಮಾತನಾಡಿಸಿ ಕಾಮಕೇತನ ಹಳ್ಳಿಗೆ ತೆರಳಿತು. ಅಂದರೆ ಕೇವಲ ಹದಿನೈದು ನಿಮಿಷಗಳಲ್ಲಿ ಅದು ಕೂಡಾ ಆ ಕತ್ತಲಲ್ಲಿ ಪರಿಶೀಲನೆ ನಡೆಸಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
 
ಬರ ಅಧ್ಯಯನ ತಂಡ ರಾತ್ರಿ ಭೇಟಿ ನೀಡಿರುವುದರಿಂದ ವಾಸ್ತವ ಸ್ಥಿತಿ ಅರಿಯಲು ವಿಫಲವಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಜಾನೆಯಿಂದಲೇ ರೈತರು ತಮ್ಮ ಹೊಲಗಳಲ್ಲಿ ಬೀಡುಬಿಟ್ಟು ತಂಡಕ್ಕೆ ಕಾಯುತ್ತಿದ್ದರು. ಕತ್ತಲಾದ ಬಳಿಕ ಸಂಜೆ 6.35ಕ್ಕೆ ತಂಡ ರೈತರ ಹೊಲಕ್ಕೆ ಬಂದು, ಮೊಬೈಲ್ ಹಾಗೂ ಬ್ಯಾಟರಿ ಬೆಳಕಿನಲ್ಲಿ ಬೆಳೆ ಹಾನಿಯನ್ನು ವೀಕ್ಷಣೆ ನಡೆಸಿತು. ಹೀಗೆ ಬಂದು ಹಾಗೆ ಹೋಗುವುದಾದರೆ ಯಾಕೆ ಬರಬೇಕಿತ್ತು ಎನ್ನುವುದು ರೈತರ ಪ್ರಶ್ನೆ.
 
ಹದಿನೈದು ದಿನದೊಳಗೆ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ನೀರಜಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಗಳೂರು ಶಾಸಕ ಎಚ್.ಪಿ. ರಾಜೇಶ್ ಇನ್ನಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments