Webdunia - Bharat's app for daily news and videos

Install App

ಬಿಸಿಲೂರಿನಲ್ಲಿ ಬರ ಅಧ್ಯಯನ ತಂಡ ಪ್ರವಾಸ

Webdunia
ಶುಕ್ರವಾರ, 1 ಫೆಬ್ರವರಿ 2019 (19:12 IST)
ರಾಜ್ಯದ ಬರ ಅಧ್ಯಯನ ತಂಡದಿಂದ ವಿವಿಧೆಡೆ ಬರ ಪರಿಶೀಲನೆ ನಡೆಸಲಾಯಿತು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿವಿಧೆಡೆ, ರಾಜ್ಯದ ಬರ ಅಧ್ಯಯನ ತಂಡದಿಂದ ಬರ ಪರಿಶೀಲನೆ ನಡೆಸಲಾಯಿತು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್​ ನೇತೃತ್ವದಲ್ಲಿ ಬರ ಅಧ್ಯಯನ ಉಪ ಸಮಿತಿ ಸದಸ್ಯರು, ಸಿಂಧನೂರು ತಾಲೂಕಿನ ತುರವಿಹಾಳ್ ಗ್ರಾಮದಲ್ಲಿ ರೈತರ ಜಮೀನುಗಳಿಗೆ ತೆರಳಿ, ಜೋಳ, ಭತ್ತ, ಹತ್ತಿ ಬೆಳೆಗಳ ವೀಕ್ಷಣೆ ಮಾಡಿದರು. ಬಳಿಕ ಬೆಳೆ ನಷ್ಟದ ಬಗ್ಗೆ ರೈತರಿಂದಲೂ ಮಾಹಿತಿ ಪಡೆದು ಕೆಲಕಾಲ ಚರ್ಚೆ ನಡೆಸಿದರು.

ಮಾಟುರು ಕೆರೆಯಲ್ಲಿ ನಡೆದ ನರೇಗಾ ಕೆಲಸ ವೀಕ್ಷಿಸಿ ಕೆಲಸಗಾರರೊಂದಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿರುವುದರ ಬಗ್ಗೆ ಚರ್ಚೆ ನಡೆಸಿದರು. ರಾಯಚೂರು ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ್, ಸಚಿವ ಬಂಡೆಪ್ಪ ಕಾಶೆಂಪೂರ್​ಗೆ ಸಾಥ್ ನೀಡಿದರು. ಜಿಲ್ಲಾಧಿಕಾರಿ ಶರತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments