Webdunia - Bharat's app for daily news and videos

Install App

ಸಕ್ಕರೆ ನಾಡಿನ ಬೆಳೆಗೆ ನೀರಿನ ಬರ!

Webdunia
ಶನಿವಾರ, 26 ಜನವರಿ 2019 (16:15 IST)
ಮಂಡ್ಯ ಜಿಲ್ಲೆಯ ಕೆ ಆರ್ ಎಸ್   ಕಟ್ಟೆಯಲ್ಲಿ ಸಾಕಷ್ಟು ನೀರಿದ್ದರೂ, ನೀರನ್ನು ಕೊಡುವ ಅಧಿಕಾರ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಕೈಗೆ ಸಿಲುಕಿರುವುದರಿಂದ ಬೇಸಿಗೆ ಬೆಳೆಗಳಿಗೆ ನೀರು ಸಿಗುವುದಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ರೈತರು ಬೇಸಿಗೆ ಬೆಳೆಗೆ ನೀರು ಸಿಗುವುದೇ ಎಂದು ಕರೆ ಮಾಡಿದ ಹಿನ್ನೆಲೆಯಲ್ಲಿ ನೀರಾವರಿ ನಿಗಮದ ಅಧೀಕ್ಷಕ ರಮೇಂದ್ರ ಬಿತ್ತನೆ ಮಾಡುವ ಬೆಳೆಗಳಿಗೆ ನೀರು ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಹಾಲಿ ಬೆಳೆದು ನಿಂತಿರುವ ಬೆಳೆಗಳ ಅಂಕಿ ಅಂಶ ಸಿದ್ದಪಡಿಸುತ್ತಿದ್ದು, ಆ ಬೆಳೆಗಳ ರಕ್ಷಣೆಗೆ ಯಾವ ರೀತಿ ನೀರು ಕೊಡಬೇಕೆಂಬುದರ ಬಗ್ಗೆ 2-3 ದಿನದಲ್ಲಿ ತೀರ್ಮಾನ ತೆಗೆದುಕೊಂಡು ಪ್ರಕಟಿಸಲಾಗುವುದು ಎಂದವರು ಹೇಳಿದ್ದಾರೆ.

ಸದ್ಯ ರಾಜ್ಯದ ಪಾಲಿನ ನೀರು 6 ಟಿಎಂಸಿ ಉಳಿದಿದ್ದರೆ, ಒಟ್ಟಾರೆ 25 ಟಿಎಂಸಿ ನೀರು ಬಳಕೆಗೆ ಸಿಗಲಿದೆ. ಆದರೆ 25 ಟಿಎಂಸಿ ನೀರನ್ನು ಹಂಚಿಕೆ ಮಾಡುವ ಅಧಿಕಾರ ನೀರು ನಿರ್ವಹಣಾ ಮಂಡಳಿಯ ಕೈಯಲ್ಲಿದ್ದು, ಮಂಡಳಿ ಬೆಳೆಗಳಿಗೆ ನೀರು ಬಿಡುವುದೋ ಅಥವಾ ಬೇಸಿಗೆಗೆ ಕುಡಿಯುವ ನೀರಿಗಾಗಿ ಸಂಗ್ರಹಿಸಿಟ್ಟುಕೊಳ್ಳುವುದೋ ಎಂಬುದು ಬಹಿರಂಗ ಆಗಬೇಕಿರುವ ಗುಟ್ಟು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments