Webdunia - Bharat's app for daily news and videos

Install App

ಬರ ಅಧ್ಯಯನ ಪ್ರವಾಸ: ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ

Webdunia
ಭಾನುವಾರ, 25 ಡಿಸೆಂಬರ್ 2016 (18:03 IST)
ಸಿಎಂ ಸಿದ್ದರಾಮಯ್ಯ ಅವರು ಬರ ಅಧ್ಯಯನ ಪ್ರವಾಸ ನಡೆಸಿದ್ದರು. ಆದರೆ, ರೈತರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಇದೀಗ ಅವರ ಸಚಿವ ಸಂಪುಟದ ಉಪಸಮಿತಿ ಸದಸ್ಯರು ರಾಜ್ಯದೆಲ್ಲಡೆ 4 ತಂಡ ಮಾಡಿಕೊಂಡು ರಾಜ್ಯದೆಲ್ಲೆಡೆ ಬರ ಅಧ್ಯಯನ ನಡೆಸುತ್ತಿರುವುದು ಯಾವ ಪುರಷಾರ್ಥಕ್ಕಾಗಿ ಎಂಬುದೇ ತಿಳಿಯುತ್ತಿಲ್ಲ ಎಂದು ಜೆಡಿಎಸ್ ಶಾಸಕ ಕೋನರೆಡ್ಡಿ ಟೀಕಿಸಿದ್ದಾರೆ. 
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಕೇಂದ್ರದಲ್ಲಿರು ಬಿಜೆಪಿ ಸರಕಾರವಾಗಲಿ, ರಾಜ್ಯದಲ್ಲಿರುವ ಕಾಂಗ್ರಸ್ ಸರಕಾರವಾಗಲಿ ರೈತರ ಕಣ್ಣೀರು ಒರೆಸುವ ಬದಲಿಗೆ ಇನ್ನಷ್ಟು ಕಣ್ಣೀರು ಹರಿಸುವಂತೆ ಮಾಡುತ್ತಿವೆ ಎಂದು ಕಿಡಿಕಾರಿದರು, 
 
ಬಿಜೆಪಿ ನಾಯಕರು ರಾಜ್ಯದಲ್ಲಿ ಬರ ಅಧ್ಯಯನ ನಡೆಸುತ್ತಿರುವುದು ಕಾಂಗ್ರೆಸ್‌ನೊಂದಿಗೆ ಪೈಪೋಟಿ ನಡೆಸುತ್ತಿದ್ದಾರೆಯೇ ಎನ್ನುವ ಅನುಮಾನ ಕಾಡುತ್ತಿದ್ದು, ಸಂಕಷ್ಟದಲ್ಲಿರುವ ರೈತನ ನೆರವಿಗೆ ಧಾವಿಸಬೇಕಿರುವ ಎರಡು ರಾಷ್ಟ್ರೀಯ ಪಕ್ಷಗಳು ರೈತರ ಸಾಲ ಮನ್ನಾ ವಿಷಯದಲ್ಲಿ ಚಕಾರ ಎತ್ತದಿರುವುದು ನೋವಿನ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು. 
 
ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ ಪ್ರಚಾರ ತೆಗೆದುಕೊಳ್ಳುತ್ತಿರುವ ಬಿಜೆಪಿ ನಾಯಕರಿಗೆ ತಾಕತ್ತಿದ್ದರೆ ತಮ್ಮ ನಾಯಕರ ಮನವೊಲಿಸಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನುದಾನ ತರಲಿ ಎಂದು ಜೆಡಿಎಸ್ ಶಾಸಕ ಕೋನರೆಡ್ಡಿ ಸವಾಲ್ ಎಸೆದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments