Webdunia - Bharat's app for daily news and videos

Install App

ಐವರಿಕೋಸ್ಟ್ ಪ್ರಜೆಯ ಮದುವೆಯ ಹಿಂದಿತ್ತು ಮಾದಕ ದ್ರವ್ಯದ ಮಾಸ್ಟರ್ ಪ್ಲಾನ್

Webdunia
ಭಾನುವಾರ, 6 ಮಾರ್ಚ್ 2022 (20:52 IST)
ಬೆಂಗಳೂರಿನಲ್ಲಿ ಮಾದಕ ಸರಬರಾಜು ದಂಧೆ ನಡೆಸುವ ಸಲುವಾಗಿ ಬೆಂಗಳೂರು ಮೂಲದ ಯುವತಿಯನ್ನು ವರಿಸಿದ ಐವರಿಕೋಸ್ಟ್ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
 
 ನಗರದಲ್ಲಿ ಮಾದಕ ಸರಬರಾಜು ದಂಧೆ ನಡೆಸುವುದಕ್ಕೆ ಅನುಕೂಲವಾಗಲಿ ಎಂದು ಇಲ್ಲಿಯ ಯುವತಿಯನ್ನೇ ವರಿಸಿ ಅಕ್ರಮ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನ ಸಿದ್ಧಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
 
ಬಂಧಿತನನ್ನ ಐವರಿಕೋಸ್ಟ್ ಮೂಲದ ಡೇನಿಯಲ್ ಜಾ ಎಂದು ಗುರುತಿಸಲಾಗಿದೆ.
 
ಬೆಂಗಳೂರು ಮೂಲದ ಯುವತಿಯೊಬ್ಬಳನ್ನ ಪ್ರೀತಿಸಿ ವಿವಾಹವಾಗಿ ಭೈರಸಂದ್ರದಲ್ಲಿ ವಾಸ್ತವ್ಯ ಹೂಡಿದ್ದ ಆರೋಪಿ, ವಿದೇಶದಿಂದ ಡ್ರಗ್ಸ್ ತಂದು ರಾಜಾರೋಷವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾರಂಭಿಸಿದ್ದ.
 
ಮಾರ್ಚ್ 4ರಂದು ಭೈರಸಂದ್ರ ವಾಟರ್ ಟ್ಯಾಂಕ್ ಬಳಿ ಮಾದಕ ಮಾತ್ರೆಗಳ ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನ ಸಿದ್ಧಾಪುರ ಠಾಣಾ ಪೊಲೀಸರು ಬಂಧಿಸಿದ್ದು, 10.7ಗ್ರಾಂ ತೂಕದ ಮಾತ್ರೆಗಳು, ಒಂದು ಬೈಕ್, ಮೊಬೈಲ್ ವಶಕ್ಕೆ ಪಡೆದಿದ್ದಾರೆ.
 
ವಿಚಾರಣೆ ವೇಳೆ ಆರೋಪಿ ಕಳೆದ ವರ್ಷವೂ ಮಾದಕ ಸರಬರಾಜು, ವಿದೇಶಿ ಕಾಯ್ದೆ ಉಲ್ಲಂಘನೆ ಆರೋಪದಡಿ ರಾಮಮೂರ್ತಿ ನಗರ ಠಾಣಾ ಪೊಲೀಸರಿಂದ ಬಂಧಿತನಾಗಿರುವುದು ತಿಳಿದುಬಂದಿದೆ. ಸದ್ಯ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ