Webdunia - Bharat's app for daily news and videos

Install App

ಡ್ರಗ್ ಪೆಡ್ಲರ್ ಬಂಧನ

Webdunia
ಭಾನುವಾರ, 15 ಮೇ 2022 (18:44 IST)
ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್‍ನ್ನು ಬಂಧಿಸಿರುವ ಸಿಸಿಬಿ ಪೊಲೀಸರು 5 ಲಕ್ಷ ಬೆಲೆಯ ನಿಷೇದಿತ ಮಾದಕ ವಸ್ತುವಾದ 5ಕೆ.ಜಿ ಗಾಂಜಾ ಮತ್ತು ಇತರೆ ವಸ್ತುಗಳ ವಶ ಪಡಿಸಿಕೊಂಡಿದ್ದಾರೆ.
 
 
ಸಿಸಿಬಿ ಘಟಕದ ಮಾದಕದವ್ಯ ನಿಗ್ರಹ ದಳದ ಅಧಿಕಾರಿಗಳ ತಂಡ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ಒಬ್ಬನನ್ನು ವಶಕ್ಕೆ ಪಡೆದು, ಆತನಿಂದ ಸುಮಾರು 5ಲಕ್ಷ ಬೆಲೆಯ ನಿಷೇದಿತ ಬೇರು, ಕಾಂಡ, ಹೂ, ಎಲೆ ಮತ್ತು ಬೀಜ ಒಳಗೊಂಡ ಮಾದಕ ವಸ್ತುವಾದ 5 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಮೊಬೈಲ್ ಫೋನ್, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದೆ.
 
ಆರೋಪಿ, ತಲೆಮರೆಸಿ ಕೊಂಡಿರುವ ಇನ್ನೊಬ್ಬ ಆರೋಪಿಯಾದ ಆಂದ್ರ ಮೂಲದ ವ್ಯಕ್ತಿಯಿಂದ ಕೆಜಿ ಗಟ್ಟಲೆ ಗಾಂಜಾವನ್ನು ಕಡಿಮೆ ಬೆಲೆಗೆ ನಗರಕ್ಕೆ ತರಿಸಿಕೊಂಡು ಕಾಲೇಜು ವಿದ್ಯಾರ್ಥಿಗಳಿಗೆ ಪರಿಚಯಸ್ಥ ಗ್ರಾಹಕರಿಗೆ ಅದರಲ್ಲೂ ವಿಶೇಷವಾಗಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರಿಗೆ 20 ಗ್ರಾಂನತೆ ಪ್ಯಾಕ್ ಮಾಡಿದ ಗಾಂಜಾದ ಪ್ರತಿ ಪ್ಯಾಕ್‍ಗೆ 1,500ರೂ ನಿಂದ 2,000 ರೂಗಳಂತೆ ಮಾರಾಟ ಮಾಡುತ್ತಿದ್ದ ಬಗ್ಗೆ ತಿಳಿದು ಕಾರ್ಯಾಚರಣೆ ನಡೆಸಿದೆ.
 
ಬಂಧಿತ ಆರೋಪಿತನ ವಿರುದ್ದ ಬೇಗೂರು ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣದ ದಾಖಲಿಸಿದೆ. ಈ ಕಾರ್ಯಾಚರಣೆಯನ್ನು ಬೆಂಗಳರು ನಗರದ ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ