Publish Date: Mon, 31 Aug 2020 (23:18 IST)
Updated Date: Mon, 31 Aug 2020 (23:20 IST)
ರಾಜ್ಯದಲ್ಲಿ ಮೂವರು ಡ್ರಗ್ ಡೀಲರ್ ಗಳು ಸೆರೆಸಿಕ್ಕಿದ್ದು, ವಿಚಾರಣೆ ತೀವ್ರಗೊಂಡಿದೆ.
ಈ ನಡುವೆ ಡ್ರಗ್ ವಿಷಯಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವೆ ಟಾಕ್ ವಾರ್ ಶುರುವಾಗಿದೆ.
ಬಿಜೆಪಿ ಸರಕಾರ ಡ್ರಗ್ ಮಾಫಿಯಾದಿಂದ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.
ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ, ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ?
ಹೀಗಂತ ಸಚಿವ ಸುಧಾಕರ್ ಟ್ವಿಟ್ ಮಾಡಿ ಮಾಜಿ ಸಿಎಂ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.