Webdunia - Bharat's app for daily news and videos

Install App

ಕುಡಿದು ವಾಹನ ಚಲಾಯಿಸಿದವರನು ಮನೆಗೆ ಸೇರಿಸುವುದು ವಾಹನ ಮಾಲೀಕರ ಜವಾಬ್ದಾರಿ

Webdunia
ಸೋಮವಾರ, 10 ಅಕ್ಟೋಬರ್ 2022 (16:13 IST)
ಕುಡಿಯುವವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ಸಂಬಂಧಪಟ್ಟ ಬಾರ್ ಮಾಲೀಕರ ಜವಾಬ್ದಾರಿಯಾಗಿದೆ ಎಂದು ಸಚಿವ ಮೌವಿನ್ ಗೋಡಿನ್ಹೊ ಹೇಳಿಕೆ ನೀಡಿದ್ದಾರೆ.
 
ಕಾನೂನಾತ್ಮಕ ನಿಬಂಧನೆಗಳನ್ನು ಪರಿಶೀಲಿಸಲು ಮತ್ತು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸುವುದಾಗಿ ಗುಡಿನ್ಹೋ ಹೇಳಿದ್ದಾರೆ.
ಪ್ರವಾಸೋದ್ಯಮಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಗೋವಾಕ್ಕೆ ಆಗಮಿಸುತ್ತಾರೆ. ಗೋವಾದಲ್ಲಿ ಆಲ್ಕೋಹಾಲ್ ಅಗ್ಗವಾಗಿದೆ ಎಂಬ ಕಾರಣಕ್ಕೆ ಹೆಚ್ಚಿನ ಪ್ರವಾಸಿಗರು ಕುಡಿದು ವಾಹನ ಚಲಾಯಿಸುತ್ತಾರೆ. ಪ್ರಸ್ತುತ, ಗೋವಾದಲ್ಲಿ ಅಪಘಾತಗಳ ಸಂಖ್ಯೆ ಅಪಾರವಾಗಿ ಹೆಚ್ಚಾಗಿದೆ. ಈ ಅಪಘಾತಗಳ ಹಿಂದಿನ ಪ್ರಮುಖ ಕಾರಣ ಕುಡಿದು ವಾಹನ ಚಲಾಯಿಸುವುದು ಎಂಬ ಅಂಶವೂ ಬೆಳಕಿಗೆ ಬಂದಿದೆ. ಹಾಗಾಗಿ ಸಚಿವ ಮೌವಿನ್ ಗುಡಿನ್ಹೊ ಈಗ ಇದೆಲ್ಲದರ ಹೊರೆಯನ್ನು ಬಾರ್ ಮಾಲೀಕರ ಮೇಲೆ ಹಾಕಲು ನಿರ್ಧರಿಸಿದ್ದಾರೆ ಎಂದೇ ಹೇಳಲಾಗುತ್ತಿದೆ. ಆದರೆ, ಗೂಡಿನೊ ಅವರ ಈ ನಿಲುವನ್ನು ಬಾರ್ ಮಾಲೀಕರು ಇದನ್ನು ವಿರೋಧಿಸುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.
 
ಈ ಮಧ್ಯೆ, ಸದ್ಯ ಗೋವಾದಲ್ಲಿ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಜಾರಿಯಲ್ಲಿದೆ. ಕೆಲ ತಿಂಗಳ ಹಿಂದೆ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಸಂಚಾರ ಪೊಲೀಸರು ಧಡಕ್ ಅಭಿಯಾನ ಆರಂಭಿಸಿದ್ದರು. ಹೆಚ್ಚಿನ ಅಪಘಾತಗಳು ಮದ್ಯದ ಅಮಲಿನಲ್ಲಿ ನಡೆಯುವುದರಿಂದ ಪೊಲೀಸರು ವಾಹನ ಚಾಲಕರ ಮೀಟರ್ ಪರೀಕ್ಷೆ ಆರಂಭಿಸಿದ್ದರು. ಈ ಅಭಿಯಾನದ ಸಂದರ್ಭದಲ್ಲಿ 1011 ಜನರು ಕುಡಿದು ವಾಹನ ಚಲಾಯಿಸುತ್ತಿರುವುದು ಬೆಳಕಿಗೆ ಬಂದಿತ್ತು. ಕುಡಿದು ವಾಹನ ಚಲಾಯಿಸುವ ಅಪರಾಧಕ್ಕೆ ಗರಿಷ್ಠ ಆರು ತಿಂಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments