Webdunia - Bharat's app for daily news and videos

Install App

ಕುಡುಕ ಮಹಾಶಯನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ!

Webdunia
ಶನಿವಾರ, 21 ಮೇ 2016 (14:40 IST)
ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ನೀಡಲು ಮುಂದಾದ ಘಟನೆ ವರದಿಯಾಗಿದೆ.
 
ಮಾಗಡಿ ರಸ್ತೆಯ ಅಂಜನಾ ನಗರದ ಸ್ಫೂರ್ತಿಧಾಮದಲ್ಲಿ ಇಂದು ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಜರುಗಿದೆ. ವೇದಿಕೆಯ ಆಗಮಿಸಿರುವ ಪಾನಮತ್ತ ವ್ಯಕ್ತಿಯೊಬ್ಬ ಪದೇ ಪದೇ ವೇದಿಕೆಯ ಮುಂಬಾಗಕ್ಕೆ ತೆರಳಿ ಸಚಿವರಿಗೆ ಕೈಮುಗಿಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ನೀಡಲು ಮಂದಾಗಿದ್ದಾನೆ. ಪಾನಮತ್ತ ವ್ಯಕ್ತಿಯ ಕಾಟ ತಾಳಲಾರದೇ ವೇದಿಕೆಯಲ್ಲಿದ್ದ ಮುಖಂಡರು ಪತ್ರವನ್ನು ತೆಗೆದುಕೊಂಡು ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ. 
 
ತನ್ನ ಮನವಿ ಪತ್ರವನ್ನು ನೀಡಿದ ಬಳಿಕವು ಸುಮ್ಮನಾಗದ ಪಾನಮತ್ತ ವ್ಯಕ್ತಿ, ಮತ್ತೆ ಮತ್ತೆ ವೇದಿಕೆಯ ಬಳಿ ತೆರಳಿ ಸಚಿವರುಗಳಿಗೆ ಕೈಮುಗಿಯಲು ಮುಂದಾಗಿ ಅಸಭ್ಯವರ್ತನೆ ತೋರಿದ್ದಾನೆ. ಕುಡುಕ ಮಹಾಶಯನ ವರ್ತನೆಗೆ ಬೇಸತ್ತ ಪೊಲೀಸರು, ಇತನನ್ನು ಹೊರಗೆಳೆದು ತಂದಿದ್ದಾರೆ.
 
ಪಾನಮತ್ತ ವ್ಯಕ್ತಿ ನೀಡಿದ ಪತ್ರದ ವಿವರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಚನ್ನಾಗಿರಬೇಕು ಎಂದು ಆಶಿಸುತ್ತೇನೆ. ಇವರಿಗೆ ದೇವರು ಆರೋಗ್ಯ ಆಯುಷ್ಯ ಕಲ್ಪಿಸಲಿ. ಮುಖ್ಯಮಂತ್ರಿಯವರು ನೂರು ವರ್ಷಗಳ ಕಾಲ ಚನ್ನಾಗಿರಬೇಕೆಂದು ಬೇಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಅವರನ್ನು ಹಾಡಿ ಹೊಗಳಿ ಪಾನಮತ್ತ ವ್ಯಕ್ತಿ ಪತ್ರ ಬರೆದಿದ್ದ ಎಂದು ವೇದಿಕೆಯಲ್ಲಿದ್ದ ಮುಖಂಡರು ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments