Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಪಾಠ ..ಕಿರಿಕ್ ಟೀಚರ್

Webdunia
ಗುರುವಾರ, 8 ಸೆಪ್ಟಂಬರ್ 2022 (15:41 IST)
ಶಿಕ್ಷಕಿಯಲ್ಲ, ಸದಾ ಎಣ್ಣೆ ಏಟಿನಲ್ಲೇ ತರಗತಿಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಟೀಚರಮ್ಮ. ಸಾಲದೆಂಬಂತೆ ಏರಿದ ಕಿಕ್ಕು ಇಳಿಯುತ್ತಿದ್ದಂತೆ ಮತ್ತೇರಿಸಲು ಡ್ರವರ್​ನಲ್ಲೂ ಮದ್ಯದ ಬಾಟಲ್​ಗಳನ್ನು ಇರಿಸಿಕೊಂಡಿದ್ದಳು.
ಆಕೆ ಅಂತಿಂತಹ ಶಿಕ್ಷಕಿಯಲ್ಲ, ಸದಾ ಎಣ್ಣೆ ಏಟಿನಲ್ಲೇ ತರಗತಿಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಟೀಚರಮ್ಮ.
ಸಾಲದೆಂಬಂತೆ ಏರಿದ ಕಿಕ್ಕು ಇಳಿಯುತ್ತಿದ್ದಂತೆ ಮತ್ತೇರಿಸಲು ಡ್ರವರ್​ನಲ್ಲೂ ಮದ್ಯದ ಬಾಟಲ್​ಗಳನ್ನು ಇರಿಸಿಕೊಳ್ಳುತ್ತಿದ್ದಳು ಕಣ್ರಪ್ಪೋ… ಸದಾ ಎಣ್ಣೆ ನಶೆಯಲ್ಲಿರುತ್ತಿರುವ ಈ ಟೀಚರಮ್ಮ ಗ್ರಾಮಸ್ಥರು ಹಾಗೂ ಪೊಲೀಸರ ಕೈಗೆ ಸಿಕ್ಕಿಬೀಳುತ್ತಿದ್ದಂತೆ ಆತ್ಮಹತ್ಯೆಯ ನಾಟಕ ಬೇರೆ ಮಾಡಿದ್ದಾಳೆ ಮಾರಾಯ್ರೆ. ಟೀಚರಮ್ಮನ ಎಣ್ಣೆ ನಶೆ ಬಗ್ಗೆ ತಿಳಿದ ಜನರು, ನಮ್ಮ ಮಕ್ಕಳಿಗೆ ಎಣ್ಣೆ ಶಿಕ್ಷಕಿ ಬೇಡವೇ ಬೇಡವೆಂದು ಪಟ್ಟುಹಿಡಿದು ನಿಂತ್ತಿದ್ದಾರೆ.
 
ತುಮಕೂರು ಜಿಲ್ಲೆಯ ಚಿಕ್ಕಸಾರಂಗಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂತಹ ಒಂದು ಘಟನೆ ಬೆಳಕಿಗೆ ಬಂದಿದೆ. ಗಂಗಲಕ್ಷ್ಮಮ್ಮ ಎಂಬ ಶಿಕ್ಷಕಿಗೆ ಕುಡಿತದ ಚಟ ಇದ್ದು, ನಿತ್ಯ ಮದ್ಯ ಸೇವನೆ ಮಾಡಿಯೇ ಶಾಲೆಗೆ ಬರುತ್ತಿದ್ದಳು. ಸಾಲದು ಎಂಬಂತೆ ಎಣ್ಣೆ ನಶೆ ಇಳಿದಾಗ ಮತ್ತೇರಿಲು ತನ್ನ ಡ್ರವರ್ ಒಳಗೂ ಮದ್ಯದ ಬಾಟಲ್​ಗಳನ್ನು ಇರಿಸಿಕೊಂಡಿದ್ದಾಳೆ. ಸದಾ ಎಣ್ಣೆ ಏಟಿನಲ್ಲೇ ಇರುತ್ತಿದ್ದ ಗಂಗಲಕ್ಷ್ಮಮ್ಮ, ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಕಿರಿಕ್ ಮಾಡಿಕೊಳ್ಳುತ್ತಿದ್ದಳು. ಅಷ್ಟೇ ಅಲ್ಲದೆ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳಿಗೆ ಹೊಡೆಯುತ್ತಿದ್ದಳು.
20 ವರ್ಷಗಳಿಂದ ಇದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗಂಗಲಕ್ಷ್ಮಮ್ಮನ ಪ್ರತಿನಿತ್ಯ ಜಗಳಕ್ಕೆ ಬೇಸತ್ತಿದ್ದಾರೆ. ಇಂದು ಸರಿಹೋಗಬಹುದು, ನಾಳೆ ಬುದ್ಧಿ ಬರಬಹುದು ಎಂದು ಯೋಚಿಸುತ್ತಿದ್ದ ಶಿಕ್ಷಕರೆಲ್ಲರೂ ಆಕೆಗೆ ಜನ್ಮದಲ್ಲಿ ಬುದ್ಧಿ ಬರಲ್ಲ ಎಂದು ಅರಿತು ಬೇರೆ ಕಡೆಗೆ ವರ್ಗಾವಣೆ ಪಡೆದು ಹೋಗುತ್ತಿದ್ದಾರೆ. ಪೊಲೀಸರು ಮತ್ತು ಗ್ರಾಮಸ್ಥರು ಶಾಲೆಗೆ ಭೇಟಿಕೊಟ್ಟು ಪರಿಶೀಲನೆ ನಡೆಸಲು ಮುಂದಾದಾಗ ಪೊಲೀಸರ ಕರ್ತವ್ಯಕ್ಕೂ ಆಕೆ ಅಡ್ಡಿಪಡಿಸಿದ್ದಾಳೆ. ಅನಿವಾರ್ಯವಾಗಿ ಗ್ರಾಮಸ್ಥರು ಟೇಬಲ್​ ಅನ್ನು ಹೊರತಂದು ಬೀಗ ಒಡೆದು ಡ್ರವರ್​ ತೆರೆದಿದ್ದಾರೆ. ಈ ವೇಳೆ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ.
 
ಮದ್ಯದ ಬಾಟಲ್​ಗಳು ಪತ್ತೆಯಾಗುತ್ತಿದ್ದಂತೆ ಗಂಗಲಕ್ಷ್ಮಮ್ಮ ಆತ್ಮಹತ್ಯೆಯ ನಾಟಕವಾಡಿದ್ದಾಳೆ. ಶಾಲೆ ಕೊಠಡಿ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ನಂತರ ಆಕೆಯನ್ನು ಬಿಇಓ ವಾಹನದಲ್ಲಿ ಕೂರಿಸಿಕೊಂಡು ಕರೆದೊಯ್ಯಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments