ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣೆ: 7 ಸೇತುವೆ ಮುಳುಗಡೆ

Webdunia
ಶನಿವಾರ, 21 ಜುಲೈ 2018 (18:26 IST)
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ತಗ್ಗಿದ ಮಳೆಯ ಪ್ರಮಾಣ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೆಜ್ ಮತ್ತು ದೂಧಗಂಗಾ ನದಿಯಿಂದ ನೀರು ಹರಿಬಿಡಲಾಗುತ್ತದೆ. ಕೃಷ್ಣಾ ನದಿಗೆ 2 ಲಕ್ಷ 25 ಸಾವಿರ ಕ್ಯೂಸೆಕ ನೀರು ಹರಿವ ಮುನ್ಸೂಚನೆ ಕಂಡು ಬಂದಿದೆ. ಇದರಿಂದಾಗಿ ಬಹಳಷ್ಟು ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.

ಪ್ರವಾಹ ಪರಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಹೇಳಿಕೆ ನೀಡಿದ್ದಾರೆ.  ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜಿಲ್ಲೆಯ ತಾಲೂಕಿನಲ್ಲಿ ಬರುವ ಕೃಷ್ಣಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.  ನದಿದಡಗಳಿಗೆ ಡಿಸಿ ಭೇಟಿ ನೀಡಿ ಯಡೂರ ಗ್ರಾಮದಲ್ಲಿ ಹೇಳಿಕೆ ನೀಡಿದ್ದು, ಕೃಷ್ಣಾನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಅದಕ್ಕಾಗಿ ನದಿಯಲ್ಲಿ ಇಳಿಯದಂತೆ ಮನವಿ ಮಾಡಿದರು. ಕೆಲ ಗ್ರಾಮದಲ್ಲಿ ಬೋಟ್ಗಳು ಕೆಟ್ಟು ನಿಂತಿವೆ. ಅದಕ್ಕಾಗಿ ಕಾರವಾರದಿಂದ ಬೋಟ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಹ ಎದುರಿಸಲು ಪ್ರತಿ ಗ್ರಾಮಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಅಧಿಕಾರಿಗಳು ಆಯಾ ಗ್ರಾಮಗಳನ್ನು ಬಿಟ್ಟು ಬೇರೆ ಕಡೆಗೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಹಿಪ್ಪರಗಿ ಬ್ಯಾರೇಜ್ನ ಹದಿನಾಲ್ಕು ಗೇಟ್ ಗಳ ಮೂಲಕ 2 ಲಕ್ಷ 3 ಸಾವಿರ ಕ್ಯುಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಸದ್ಯಕ್ಕೆ  ಚಿಕ್ಕೋಡಿ ವ್ಯಾಪ್ತಿಯ 7 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಅವುಗಳಲ್ಲಿ ಪ್ರಮುಖವಾಗಿ ಯಡೂರ-ಕಲ್ಲೊಳ, ಕಾರದಗಾ-ಬೋಜ, ಬೋಜವಾಡಿ- ಕನ್ನುರ, ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಸಿ, ಮಲ್ಲಿಕವಾಡ-ದತ್ತವಾಡ, ಕುಡಚಿ-ಉಗಾರ ಸೇತುವೆಗಳು ಮುಳುಗಡೆಯಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments