Webdunia - Bharat's app for daily news and videos

Install App

ಆಕರ್ಷಣೆಯಾದ ದುರ್ಗಾದೇವಿ ಜಾತ್ರೆ

Webdunia
ಭಾನುವಾರ, 9 ಜುಲೈ 2023 (14:30 IST)
ಬಾಗಲಕೋಟೆ ನಗರದ ಹರಣಸಿಕಾರಿ ಕಾಲೋನಿಯ ದಂಡಿನ ದುರ್ಗಾದೇವಿ ಜಾತ್ರೆ ಅಂದರೆ ತೆಂಗಿನಕಾಯಿ ಪವಾಡಕ್ಕೆ ಹೆಸರಾದ ಜಾತ್ರೆ. ಇಲ್ಲಿ ಸ್ವತಃ ದುರ್ಗಾದೇವಿ ಪೂಜಾರಿಗಳು ತಲೆಗೆ ತೆಂಗಿನಕಾಯಿ ಒಡೆದುಕೊಂಡು ತೆಂಗಿನಕಾಯಿ ಒಡೆಯುವ ಮೂಲಕ ಪವಾಡ ಮೆರೆಯುತ್ತಾರೆ. ತಲೆಯಿಂದ ತೆಂಗಿನಕಾಯಿ ಒಡೆದು ಬೀಸಾಕಿದ್ರೂ ಆ ಪೂಜಾರಿಗಳಿಗೆ ಮಾತ್ರ ಯಾವುದೇ ಗಾಯ ಆಗಲ್ಲ. ಹರಶಿಕಾರಿ ಜನಾಂಗದಲ್ಲಿ ತಲೆತಲಾಂತರದಿಂದ ಈ ಪದ್ದತಿ ನಡೆದುಕೊಂಡು ಬಂದಿದ್ದು, ಬಾಗಲಕೋಟೆ ನಗರದಲ್ಲಿ ಕಳೆದ 40 ವರ್ಷಗಳಿಂದ ತೆಂಗಿನಕಾಯಿ ಪವಾಡ ನಡೆಯುತ್ತಿದೆ, ಇಂದಿಗೂ ಮುಂದುವರೆಯುತ್ತಿದೆ. ಅಂದು ಕಾಣಿಸಿಕೊಳ್ಳುತ್ತಿದ್ದ ಸಾಂಕ್ರಾಮಿಕ ರೋಗ ತಡೆಯೋದಕ್ಕೆ ಅಂತ ಶುರುವಾದ ತೆಂಗಿನಕಾಯಿ ಪವಾಡ ಇಂದಿಗೂ ನಡೆಯುತ್ತಿದೆ. ದೇವಿಯ ಇಬ್ಬರು ಪೂಜಾರಿಗಳು ಎರಡು ಪ್ರತ್ಯೇಕ ಸ್ಥಳದಲ್ಲಿ ತೆಂಗಿನಕಾಯಿಗಳನ್ನು ತಲೆಗೆ ಒಡೆಯುವ ಪವಾಡ ಮಾಡುತ್ತಾರೆ. ಇನ್ನು ಇದರ ಜೊತೆಗೆ ಭಕ್ತರು ತಮ್ಮ ವಿವಿಧ ಹರಕೆ ತೀರಿಸೋದಕ್ಕೆ ದೀಡ ನಮಸ್ಕಾರ ವಿಶೇಷ ಪೂಜೆ ಪುನಸ್ಕಾರ ಮಾಡುತ್ತಾರೆ. ಇಲ್ಲಿ ದಂಡಿನ ದುರ್ಗಾದೇವಿ ಜಾತ್ರೆ ಹರಣಶಿಕಾರಿ ಜನರೆಲ್ಲರನ್ನು ಒಗ್ಗೂಡಿಸುವ ಜಾತ್ರೆ.ಈ ಜಾತ್ರೆಗೆ ಅವರ ಮನೆ ಮಂದಿ ಎಲ್ಲೇ ಇದ್ದರೂ ಸ್ಥಳಕ್ಕೆ ಬಂದು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments