Webdunia - Bharat's app for daily news and videos

Install App

ದಸರಾ ಬಲ ಭೀಮ ಆನೆ ಹುಡುಗಿಯರ ಮುಂದೆ ಭಾರೀ ನಾಟ್ಟಿ

Sampriya
ಮಂಗಳವಾರ, 15 ಅಕ್ಟೋಬರ್ 2024 (16:53 IST)
photo Courtesy Instagram
ಮೈಸೂರು ದಸರಾ ಡ್ಯೂಟಿಯನ್ನು ಯಶಸ್ವಿಯಾಗಿ ಮುಗಿಸಿ ಎಲ್ಲ ಆನೆಗಳು ನಾಡಿನಿಂದ ಕಾಡಿಗೆ ಪ್ರಯಾಣ ಬೆಳೆಸಿದೆ. ಕಳೆದ ಒಂದೂವರೆ ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ, ಜಂಬೂಸವಾರಿ ಮೆರವಣಿಗೆಯಲ್ಲಿ ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದೆ.

ಇನ್ನೂ ಗಜಪಡೆಗಳು ಕೂಡಾ ಅಪಾರ ಅಭಿಮಾನಿಗಳನ್ನು ಹೊಂದಿರುತ್ತಾರೆ. ಈ ಹಿಂದೆ ಸಾವನ್ನಪ್ಪಿದ್ದ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಅ‍ಪಾರ ಜನರ ಪ್ರೀತಿಯನ್ನು ಗಳಿಸಿದ್ದ. ಇದೀಗ ಅಂಬಾರಿ ಹೊರುತ್ತಿರುವ ಅಭಿಮನ್ಯು ಕೂಡಾ ತನ್ನ ಶಿಸ್ತು ಹಾಗೂ ನಡವಳಿಕೆ ಮೂಲಕ ಎಲ್ಲರ ಮನಸ್ಸನ್ನು ಗೆದ್ದು, ಅಪಾರ ಅಭಿಮಾನಿಗಳನ್ನು ಗಳಿಸಿದ್ದಾನೆ. ಇನ್ನೂ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ  ಆನೆ ಭೀಮನ ತುಂಟಾಟದ ಬಗ್ಗೆ ಕ್ರೇಜ್ ಜೋರಾಗಿದೆ.

ಈಚೆಗೆ ಮೈಸೂರು ಜಂಬೂಸವಾರಿಯಲ್ಲಿ ಭಾಗವಹಿಸಿದ್ದ ಹಾಗೂ ಭೀಮ ಆನೆ ತನ್ನ ತುಂಟಾದ ಮೂಲಕ ಹೆಣ್ಮಕ್ಕಳ ನೆಚ್ಚಿನ ಆನೆಯಾಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಭೀಮನ ಮೇಲೆ ಕ್ರೇಜ್ ಜಾಸ್ತಿಯಾಗಿದೆ. ಹುಡುಗಿಯರು ಭೀಮನ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಹಾಗೆಯೇ ಹುಡುಗಿಯರ ಮಾತಿಗೆ ರೆಸ್ಪಾಂಡ್  ಮಾಡುವ ಭೀಮನೇ ನಮ್ಮ ನೆಚ್ಚಿನ ಆನೆಯೆಂದು ಹೇಳುತ್ತಿದ್ದಾರೆ.

24 ವರ್ಷದ ಸ್ನೇಹಜೀವಿ ಭೀಮ ಆನೆ ಜಂಬೂಸವಾರಿ ವೇಳೆ ಜನಸಮೂಹದ ಕೂಗಿಗೆ ಸೊಂಡಿಲೆತ್ತಿ ನಮಸ್ಕಾರಿಸಿದ್ದಾನೆ. ಈ ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡು, ಬರೆದುಕೊಂಡಿದ್ದಾರೆ. 6 ತಿಂಗಳ ಮರಿ ಆಗಿದ್ದಾಗ ತಾಯಿ ಇಂದ ಬೇರ್ಪಟ್ಟು ನಾಗರಹೊಳೆ ಅಭಯಾರಣ್ಯದ ಭೀಮನಕಟ್ಟೆ ಎಂಬ ಜಾಗದಲ್ಲಿ ಸಿಕ್ಕಿದ, ಅದೇ ವರ್ಷದಲ್ಲಿ 6 ಮರಿಗಳು ಸಿಕ್ಕಿದ್ದು ಅದರಲ್ಲಿ ಬದುಕುಳಿದವ ತಿಂಡಿಪೋತ ಈ ಭೀಮ ಮಾತ್ರ ತುಂಟಾಟ, ತಿಂಡಿಪೋತ, ಸ್ನೇಹಜೀವಿ. ಮುಂದಿನ ಜಂಬೂಸವಾರಿ ರೂವಾರಿ ಆಗುವ ಎಲ್ಲಾ ಲಕ್ಷಣ ಇದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments