Webdunia - Bharat's app for daily news and videos

Install App

ಸದಾನಂದ ಗೌಡರಿಗೆ ಕಾಂಗ್ರೆಸ್ ಆಹ್ವಾನ: ಇಂದು ತೀರ್ಮಾನ

Krishnaveni K
ಮಂಗಳವಾರ, 19 ಮಾರ್ಚ್ 2024 (09:28 IST)
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಹಾಲಿ ಸಂಸದ, ಬಿಜೆಪಿ ನಾಯಕ ಡಿವಿ ಸದಾನಂದ ಗೌಡ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ನಿಜ. ನನ್ನ ರಾಜಕೀಯ ಭವಿಷ್ಯ ಏನೆಂದು ತೀರ್ಮಾನ ಮಾಡುವುದಾಗಿ ಸದಾನಂದ ಗೌಡರು ಹೇಳಿದ್ದಾರೆ. ಬೇರೆ ಬೇರೆಯವರು ನನ್ನನ್ನು ಸಂಪರ್ಕ ಮಾಡಿರುವುದು ನಿಜ. ನಮ್ಮ ಪಕ್ಷದ ಪ್ರಮುಖರೂ ನನ್ನಲ್ಲಿ ಬಂದು ಸಮಾಲೋಚನೆ ಮಾಡಿರುವುದೂ ಸತ್ಯ ಎಂದಿದ್ದಾರೆ.

ಡಿಕೆ ಶಿವಕುಮಾರ್ ಈ ಮೊದಲು ಬಿಜೆಪಿಯ ಮಾಜಿ ಸಿಎಂ ಒಬ್ಬರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದಿದ್ದರು. ಇದೀಗ ಕಾಂಗ್ರೆಸ್ಸಿಗರು ಸಂಪರ್ಕಿಸಿರುವುದು ಸತ್ಯ ಎಂದಿದ್ದಾರೆ. ಆ ಮೂಲಕ ಡಿಕೆಶಿ ಮಾತು ಸತ್ಯ ಎಂದು ಒಪ್ಪಿಕೊಂಡಿದ್ದಾರೆ. ನನ್ನ ಮನಸ್ಸು ಮತ್ತು ಮನೆಯವರನ್ನು ಕೇಳಿ ಮುಂದಿನ ನಿರ್ಣಯ ತಿಳಿಸುತ್ತೇನೆ ಎಂದಿದ್ದಾರೆ.

ಇಂದು ಸದಾನಂದ ಗೌಡ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೋ ಅಥವಾ ರಾಜಕೀಯ ನಿವೃತ್ತಿಯಾಗುತ್ತಾರೋ ಎಂದು ಇಂದು ತೀರ್ಮಾನ ಕೈಗೊಳ‍್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments