ಡಿವಿ ಸದಾನಂದ ಗೌಡಗೆ ಕಾಂಗ್ರೆಸ್ ಆಫರ್: ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ

Krishnaveni K
ಬುಧವಾರ, 13 ಮಾರ್ಚ್ 2024 (13:45 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡಗೆ ಟಿಕೆಟ್ ಕೈ ತಪ್ಪುವ ಭೀತಿಯಿದೆ. ಈ ನಡುವೆ ಅವರು ಕಾಂಗ್ರೆಸ್ ಸೇರಲು ಮನಸ್ಸು ಮಾಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಲೋಕಸಭೆ ಚುನಾವಣೆ ಕರ್ನಾಟಕ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ. ಈ ಪಟ್ಟಿಯಲ್ಲಿ ಡಿವಿ ಸದಾನಂದ ಗೌಡ ಹೆಸರು ಕೈ ಬಿಡಲಾಗಿದೆ ಎಂದು ಕೇಳಿಬರುತ್ತಿದೆ. ಮಾಜಿ ಸಿಎಂ, ಕೇಂದ್ರ ಸಚಿವರಾಗಿದ್ದ ಡಿವಿ ಸದಾನಂದ ಗೌಡ ಇತ್ತೀಚೆಗೆ ರಾಜಕೀಯ ನಿವೃತ್ತಿ ಪಡೆಯುವ ಹೇಳಿಕೆ ನೀಡಿದ್ದೇ ಅವರಿಗೆ ಮುಳುವಾಗಿದೆ. ಈ ಕಾರಣಕ್ಕೆ ಅವರ ಹೆಸರನ್ನು ಹೈಕಮಾಂಡ್ ಸೇರಿಸಿಕೊಳ್ಳಲು ಒಪ್ಪಿಲ್ಲ ಎನ್ನಲಾಗಿದೆ.

ಇದು ಡಿವಿ ಸದಾನಂದ ಗೌಡ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಅವರು ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾನಂದ ಗೌಡರು ಕಾಂಗ್ರೆಸ್ ಗೆ ಬಂದರೆ ಸೇರಿಸಿಕೊಳ್ಳುತ್ತೀರಾ ಎಂದು ಅವರಿಗೆ ಮಾಧ್ಯಮಗಳು ಪ್ರಶ್ನಿಸಿವೆ.

ಇದಕ್ಕೆ ಉತ್ತರಿಸಿದ ಡಿಕೆಶಿ, ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ನಮ್ಮನ್ನು ಸಂಪರ್ಕಿಸಿದ್ದಾರೆ. ಸದಾನಂದ ಗೌಡರು ಕಾಂಗ್ರೆಸ್ ಗೆ ಬಂದರೆ ಸ್ವಾಗತಿಸುತ್ತೇವೆ ಎಂದಿದ್ದಾರೆ. ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದ ನಾನು ನಾಯಕರ ಒತ್ತಡದಿಂದ ನಿರ್ಧಾರ ವಾಪಸ್ ಪಡೆದಿದ್ದೆ. ಈಗ ನನಗೆ ಟಿಕೆಟ್ ನೋಡದೇ ಇದ್ದರೆ ನೋವಾಗುತ್ತದೆ ಎಂದಿದ್ದರು. ಹೀಗಾಗಿ ಈಗ ಸದಾನಂದ ಗೌಡರ ನಡೆ ನಿಗೂಢವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments