Webdunia - Bharat's app for daily news and videos

Install App

ಡಿವಿ ಸದಾನಂದ ಗೌಡಗೆ ಕಾಂಗ್ರೆಸ್ ಆಫರ್: ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ

Krishnaveni K
ಬುಧವಾರ, 13 ಮಾರ್ಚ್ 2024 (13:45 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡಗೆ ಟಿಕೆಟ್ ಕೈ ತಪ್ಪುವ ಭೀತಿಯಿದೆ. ಈ ನಡುವೆ ಅವರು ಕಾಂಗ್ರೆಸ್ ಸೇರಲು ಮನಸ್ಸು ಮಾಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಲೋಕಸಭೆ ಚುನಾವಣೆ ಕರ್ನಾಟಕ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ. ಈ ಪಟ್ಟಿಯಲ್ಲಿ ಡಿವಿ ಸದಾನಂದ ಗೌಡ ಹೆಸರು ಕೈ ಬಿಡಲಾಗಿದೆ ಎಂದು ಕೇಳಿಬರುತ್ತಿದೆ. ಮಾಜಿ ಸಿಎಂ, ಕೇಂದ್ರ ಸಚಿವರಾಗಿದ್ದ ಡಿವಿ ಸದಾನಂದ ಗೌಡ ಇತ್ತೀಚೆಗೆ ರಾಜಕೀಯ ನಿವೃತ್ತಿ ಪಡೆಯುವ ಹೇಳಿಕೆ ನೀಡಿದ್ದೇ ಅವರಿಗೆ ಮುಳುವಾಗಿದೆ. ಈ ಕಾರಣಕ್ಕೆ ಅವರ ಹೆಸರನ್ನು ಹೈಕಮಾಂಡ್ ಸೇರಿಸಿಕೊಳ್ಳಲು ಒಪ್ಪಿಲ್ಲ ಎನ್ನಲಾಗಿದೆ.

ಇದು ಡಿವಿ ಸದಾನಂದ ಗೌಡ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಅವರು ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾನಂದ ಗೌಡರು ಕಾಂಗ್ರೆಸ್ ಗೆ ಬಂದರೆ ಸೇರಿಸಿಕೊಳ್ಳುತ್ತೀರಾ ಎಂದು ಅವರಿಗೆ ಮಾಧ್ಯಮಗಳು ಪ್ರಶ್ನಿಸಿವೆ.

ಇದಕ್ಕೆ ಉತ್ತರಿಸಿದ ಡಿಕೆಶಿ, ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ನಮ್ಮನ್ನು ಸಂಪರ್ಕಿಸಿದ್ದಾರೆ. ಸದಾನಂದ ಗೌಡರು ಕಾಂಗ್ರೆಸ್ ಗೆ ಬಂದರೆ ಸ್ವಾಗತಿಸುತ್ತೇವೆ ಎಂದಿದ್ದಾರೆ. ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದ ನಾನು ನಾಯಕರ ಒತ್ತಡದಿಂದ ನಿರ್ಧಾರ ವಾಪಸ್ ಪಡೆದಿದ್ದೆ. ಈಗ ನನಗೆ ಟಿಕೆಟ್ ನೋಡದೇ ಇದ್ದರೆ ನೋವಾಗುತ್ತದೆ ಎಂದಿದ್ದರು. ಹೀಗಾಗಿ ಈಗ ಸದಾನಂದ ಗೌಡರ ನಡೆ ನಿಗೂಢವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments