Webdunia - Bharat's app for daily news and videos

Install App

ಎನ್ಇಪಿ ಶಿಕ್ಷಣ ಪದ್ದತಿಗೆ ಆಯೋಗ ರಚನೆಗೆ ಡಿವಿಎಸ್ ಖಂಡನೆ

Webdunia
ಗುರುವಾರ, 12 ಅಕ್ಟೋಬರ್ 2023 (18:20 IST)
ಎನ್ಇಪಿ ಪದ್ಧತಿಯನ್ನು ಎಲ್ಲ ಆಯಾಮಗಳಲ್ಲೂ ಪರಿಶೀಲಿಸಿ, ಅಧ್ಯಯನ ನಡೆಸಿ ತರಲಾಗಿದೆ.ಅದರಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆಧ್ಯತೆ ಕೊಡಬೇಕು ಅನ್ನೋದು ಇದೆ.ಎನ್‌ಇಪಿಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಲಾಗಿದೆ.ಎನ್ಇಪಿ ರದ್ದು ಮಾಡಿರೋದು ಖಂಡನೀಯ.ಎನ್ಇ‌ಪಿ ತರುತ್ತಿರುವುದು ಮಾರಕ ನಡೆ.ಅವರಿಗೆ ಬೇಕಾದ ಹಾಗೆ ತಜ್ಞರ ವರದಿ ಪಡೆಯಲು ಮುಂದಾಗಿದ್ದಾರೆ.ಅವರಿಗೆ ಬೇಕಾದ ವರದಿ ಪಡೆಯಲು ಹೊರಗಿನ ಶಿಕ್ಷಣ ತಜ್ಞರನ್ನೂ ಆಯೋಗದಲ್ಲಿ ಸದಸ್ಯರಾಗಿ ಮಾಡಿದ್ದಾರೆ.ಕೇಂದ್ರದ ಬರ ಅಧ್ಯಯನ ತಂಡದ ಎದುರು ಬರ ಪರಿಸ್ಥಿತಿ ಬಗ್ಗೆ ಸರಿಯಾಗಿ ತಿಳಿಸಲಿಲ್ಲ.ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ ಎಂದು ಸಂಸದ ಡಿ ವಿ ಸದಾನದಗೌಡ ಅಸಾಮಾಧಾನ ಹೊರಹಾಕಿದ್ದಾರೆ.
 
ಅಲ್ಲದೇ ವಿದ್ಯುತ್ ಸಮಸ್ಯೆ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ.ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ಸಮಸ್ಯೆ ಆಲಿಸದೇ ಬೇಜವಾಬ್ದಾರಿ ನಡೆ ಸರ್ಕಾರ ತೋರಿಸ್ತಿದೆ.ಸರ್ಕಾರದ ಎಸ್‌ಇ‌ಪಿ ತರುವ ನಿರ್ಧಾರ ರಾಜ್ಯ ಶಿಕ್ಷಣ ವಲಯಕ್ಕೆ ಅಪಾಯಕರ ಎಂದು ಸದಾನಂದ ಗೌಡ ಹೇಳಿದ್ದು,ಸಿಡಬ್ಲ್ಯೂಆರ್‌ಸಿ ಆದೇಶ ವಿಚಾರವಾಗಿ ಕರ್ನಾಟಕದಲ್ಲಿ ನೀರಿಲ್ಲ ಬಿಡಲು ಆಗಲ್ಲ.ಆದ್ರೆ ತಮಿಳುನಾಡಿನಲ್ಲಿ ನೀರಿನ ಅವಶ್ಯಕತೆ ಎಲ್ಲಿದೆ ಅಂತ ಅವರು ಪ್ರತಿಪಾದಿಸ್ತಿಲ್ಲ.ನಮ್ಮವರು ಕುಡಿಯಲು ನೀರು ಅಗತ್ಯವಾಗಿ ಬೇಕು ಅನ್ನೋದನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲ ಆಗಿದ್ದಾರೆ.ಇದು ಸರ್ಕಾರದ, ಜಲಸಂಪನ್ಮೂಲ ಖಾತೆ ಸಚಿವರ ವೈಫಲ್ಯ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments