ಇತ್ತೀಚಿಗೆ ಸಾವಿಗೆ ಶರಣಾಗಿದ್ದ ಡಿವೈಎಸ್ಪಿ ಕಪ್ಪಪ್ಪ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಪೊಲೀಸ್ ಪೇದೆಯಾಗಿದ್ದ ಕಲ್ಲಪ್ಪ ಸಹೋದರ ಯಲ್ಲಪ್ಪ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಾಲ್ಲೂಕಿನ ಕುಲಗೋಡದಲ್ಲಿ ಪೊಲೀಸ್ ಪೇದೆಯಾಗಿದ್ದ ಯಲ್ಲಪ್ಪ (28)ನಿನ್ನೆ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ರಾಯಭಾಗ ತಾಲ್ಲೂಕಿನ ಹಂದಿಗುಂದ ಗ್ರಾಮದ ಇವರು ಅವಿವಾಹಿತರಾಗಿದ್ದು, ತಂದೆ-ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಜುಲೈ 5 ರಂದು ಅಣ್ಣನ ಸಾವಿನ ಬಳಿಕ ಯಲ್ಲಪ್ಪ ಖಿನ್ನತೆಗೆ ಜಾರಿದ್ದು ಹೆಚ್ಚೆಚ್ಚು ಒಂಟಿಯಾಗಿಯೇ ಇರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ನನ್ನನ್ನು ಕ್ಷಮಿಸು ಎಂದು ಪೋಷಕರಲ್ಲಿ ಕೇಳಿಕೊಂಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ವೈದ್ಯರು ಆತ್ಮಹತ್ಯೆ ಎಂದು ವರದಿ ನೀಡಿದ್ದಾರೆ.