Webdunia - Bharat's app for daily news and videos

Install App

ಕಲ್ಲಪ್ಪ ಹಂಡಿಭಾಗ್ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ ಖಾಂಡ್ಯ ಶೋಧ ಕಾರ್ಯ ಚುರುಕು: ಎಸ್‌ಪಿ ಅಣ್ಣ ಮಲೈ

Webdunia
ಭಾನುವಾರ, 25 ಸೆಪ್ಟಂಬರ್ 2016 (16:56 IST)
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ ಖಾಂಡ್ಯನ ಶೋಧ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ ಎಂದು ಎಸ್‌ಪಿ ಅಣ್ಣ ಮಲೈ ತಿಳಿಸಿದ್ದಾರೆ.
 
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ ಖಾಂಡ್ಯ ಬೇರೆ ರಾಜ್ಯದಲ್ಲಿ ತಲೆ ಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಈಗಾಗಲೇ ಆತನ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದರು. 
 
ಈಗಾಗಲೇ ಪ್ರಕರಣದ ಸಿಐಡಿ ತನಿಖಾಧಿಕಾರಿ ಬದಲಾಗಿದ್ದು, ಪ್ರಕರಣ ಕುರಿತು ಇನ್ನೊಬ್ಬ ತನಿಖಾಧಿಕಾರಿ ತನಿಖೆಯನ್ನು ಮುಂದುವರೆಸಿದ್ದಾರೆ. ಶೀಘ್ರದಲ್ಲೇ ಪ್ರವೀಣ ಖಾಂಡ್ಯನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.  
 
ತೇಜಸ್ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಮತ್ತು 10 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ ಎಂಬ ಆರೋಪ ಕಲ್ಲಪ್ಪ ಅವರ ಮೇಲೆ ಕೇಳಿ ಬಂದಿತ್ತು. ಇದರಿಂದ ಮನನೊಂದು ಕಲ್ಲಪ್ಪ ಹಂಡಿಭಾಗ್ ಅವರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಕಲ್ಲಪ್ಪ ಆತ್ಮಹತ್ಯೆಗೆ ನಿಜವಾದ ಕಾರಣ ಏನೆಂಬ ಬಗ್ಗೆ ತನಿಖೆಯ ನಂತರವೇ ತಿಳಿದು ಬರಲಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments