Webdunia - Bharat's app for daily news and videos

Install App

ರಾಜ್ಯ ಸರಕಾರ ಆತ್ಮಹತ್ಯೆ ಭಾಗ್ಯ ಕೂಡಾ ನೀಡುತ್ತಿದೆ: ಕುಮಾರಸ್ವಾಮಿ ವಾಗ್ದಾಳಿ

Webdunia
ಶುಕ್ರವಾರ, 8 ಜುಲೈ 2016 (14:56 IST)
ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬೇರೆ ಪ್ರಕರಣದಲ್ಲಿ ತಕ್ಷಣವೇ ಎಫ್‌ಐಆರ್ ದಾಖಲಿಸಿ ಬಂಧಿಸುತ್ತಾರೆ. ಅದೇ ರೀತಿ ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಬೇಕು. ಆರೋಪ ಸಾಬೀತಾಗುವವರೆಗೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
 
ರಾಜ್ಯ ಸರಕಾರ ದರೋಡೆಕೋರರ ಪರವಾಗಿದ್ದು, ಲೂಟಿ ಹೊಡೆಯುವವರೆಗೆ ರಕ್ಷಣೆ ನೀಡುತ್ತಿದೆ. ರಾಜ್ಯ ಪೊಲೀಸ್ ಇಲಾಖೆಯನ್ನು ದರೋಡೆ ಮಾಡಲು ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಗುಡುಗಿದ್ದಾರೆ.
 
ಡಿವೈಎಸ್‌ಪಿ ಗಣಪತಿ ಬರೆದಿರುವ ಡೆತ್ ನೋಟ್‌ನಲ್ಲಿ ಯಾರು ಹೆಸರನ್ನು ಉಲ್ಲೇಖಿಸಿದ್ದಾರೊ ಅವರು ಕುರಿತು ಮಾಹಿತಿ ಸಂಗ್ರಹಿಸುತ್ತೇನೆ. ರಾಜ್ಯ ಸರಕಾರ ಡಿವೈಎಸ್‌ಪಿ ಗಣಪತಿ ಬರೆದಿರುವ ಡೆತ್ ನೋಟ್‌‌ನ್ನು ಸಹ ಅವರೊಂದಿಗೆ ಸಮಾಧಿ ಮಾಡುತ್ತದೆ ಎಂದು ಲೇವಡಿ ಮಾಡಿದ್ದಾರೆ.
 
ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವುದು ಸರಿಯಲ್ಲ. ಬದಲಾಗಿ, ಸರಕಾರದ ವಿರುದ್ಧ ದಿಟ್ಟ ನಿಲುವು ತೆಗೆದುಕೊಳ್ಳಬೇಕು. ಇಲ್ಲಿಯವರೆಗೂ ರೈತರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಆದರೆ, ಇದೀಗ ಸರಕಾರಿ ಆಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಜ್ಯ ಸರಕಾರ ಎಲ್ಲಾ ಭಾಗ್ಯಗಳ ಜೊತೆಗೆ ಆತ್ಮಹತ್ಯೆ ಭಾಗ್ಯವನ್ನು ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

Video: ಅಂಬೇಡ್ಕರ್ ಫೋಟೋ ಮುಂದೆ ಕಾಲ ಮೇಲೆ ಕಾಲು ಹಾಕಿ ಕೂತಿದ್ದ ಲಾಲೂ ಪ್ರಸಾದ್: ಮೋದಿ ವಾಗ್ದಾಳಿ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments