Select Your Language

Notifications

webdunia
webdunia
webdunia
webdunia

ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷಿ, ಆಧಾರಗಳು ಬೇಕಲ್ಲವೇ: ಕೆ.ಜೆ.ಜಾರ್ಜ್

ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷಿ, ಆಧಾರಗಳು ಬೇಕಲ್ಲವೇ: ಕೆ.ಜೆ.ಜಾರ್ಜ್
ಬೆಂಗಳೂರು , ಸೋಮವಾರ, 11 ಜುಲೈ 2016 (11:18 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷಿ, ಆಧಾರಗಳು ಬೇಕಲ್ಲವೇ ಎಂದು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಪ್ರತಿಪಕ್ಷಗಳಿಗೆ ತೀರುಗೇಟು ನೀಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಆದರೆ, ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷಿ, ಆಧಾರಗಳು ಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸದನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರ ನೀಡಲಿದ್ದಾರೆ. ವ್ಯಕ್ತಿಗತವಾಗಿ ನನ್ನ ವಿರುದ್ಧ ಆರೋಪಗಳ ಬಂದರೆ ಪ್ರತಿಕ್ರಿಯೆ ನೀಡಲು ಸಿದ್ಧವಾಗಿದ್ದೇನೆ. ನನ್ನ ವಿರುದ್ಧ ಎಫ್‌ಐಆರ್ ದಾಖಲಾದರೆ ಕಾನೂನು ಬದ್ಧವಾಗಿ ಹೋರಾಟ ನಡೆಸಲು ಸಿದ್ಧವಾಗಿದ್ದೇನೆ ಎಂದು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಳೆತ ಬಾಳೆಹಣ್ಣನ್ನು ಮತ್ತೆ ಹಳದಿಯಾಗಿಸಿ, ವಿಡಿಯೋ ನೋಡಿ