Webdunia - Bharat's app for daily news and videos

Install App

ಇ.ಡಿ.ಯಿಂದ ಸೋನಿಯಾ ಗಾಂಧಿಗೆ ಡ್ರಿಲ್ - ಕಾಂಗ್ರೆಸ್ ಪ್ರತಿಭಟನೆ

Webdunia
ಬುಧವಾರ, 20 ಜುಲೈ 2022 (17:50 IST)
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಜುಲೈ 21ರಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿಚಾರಣೆ ನಡೆಸಲಿದೆ. ಸೋನಿಯಾ ವಿಚಾರಣೆ ಖಂಡಿಸಿ ಕೆಪಿಸಿಸಿ ಪ್ರತಿಭಟನೆಗೆ ಕರೆ ನೀಡಿದೆ.
 
ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ನಡೆಸಿತ್ತು.
ಕೆಪಿಸಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿತ್ತು. ಇದೀಗ ಮತ್ತೆ ಪ್ರತಿಭಟನೆ ಅಸ್ತ್ರ ಪ್ರಯೋಗಿಸಲು ಕೆಪಿಸಿಸಿ ಮುಂದಾಗಿದೆ.
 
ಗುರುವಾರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟಿಸಲಿದ್ದಾರೆ. ಸೋನಿಯಾ ಗಾಂಧಿಯನ್ನು ನೈತಿಕವಾಗಿ ಬೆಂಬಲಿಸುವ ಜೊತೆಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ನಗರದ ಸ್ವಾಂತ್ರ್ಯ ಉದ್ಯಾನದಿಂದ ಹಿಡಿದು ಕೆ. ಆರ್. ವೃತ್ತ, ವಿಧಾನಸೌಧ ಮುಂದಿನ ರಸ್ತೆ ಮೂಲಕ ರಾಜಭವನದ ತನಕ ಕಾಂಗ್ರೆಸ್‌ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments