ನಗರದಲ್ಲಿ ಇದ್ದು ಇಲ್ಲದಂತಾದ ಇ – ಶೌಚಾಲಯ

Webdunia
ಗುರುವಾರ, 8 ಜೂನ್ 2023 (18:55 IST)
ಪ್ರತಿ ವರ್ಷ ಸ್ವಚ್ಛ ಭಾರತ ಸಮೀಕ್ಷೆ ಬಂದಾಗ ಪಾಲಿಕೆ ನಿದ್ದೆಯಿಂದ ಎದ್ದವರಂತೆ ಚುರುಕಾಗುತ್ತದೆ. ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡುತ್ತದೆ. ಆದ್ರೆ ಈಗ ಇ – ಶೌಚಾಲಯ ನಿರ್ಮಿಸಿ  ಯಾವ ಪ್ರಯೋಜನವು ಇಲ್ಲದಂತಿದೆ. ಕೆಲವು ಕಡೆ ಕೆಟ್ಟು ನಿಂತರೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ.
 
ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಇ ಶೌಚಾಲಯ ಸಮರೋಪಾದಿಯಲ್ಲಿ ಮಾಡುತ್ತದೆ. ತಂತ್ರಜ್ಞಾನ ಆಧಾರಿತ ಸ್ವಯಂಪ್ರೇರಿತವಾಗಿ ಸ್ವಚ್ಛ ಸಾಮರ್ಥ್ಯವಿರುವ ಇ-ಶೌಚಾಲಯವನ್ನು ಉಳಿಸಿಕೊಳ್ಳುವುದು ಬಿಬಿಎಂಪಿಗೆ ದೊಡ್ಡ ತಲೆನೋವಾಗಿದೆ. ಬಿಬಿಎಂಪಿ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗೆ ಉಪಯೋಗವಾಗ್ಲಿ ಅನ್ನುವ ಉದ್ದೇಶದಿಂದ ಮತ್ತು ಪರಿಸರಸ್ನೇಹಿ ಮತ್ತು ಸಾರ್ವಜನಿಕರ ತುರ್ತು ಅಗತ್ಯಕ್ಕೆ ಪೂರಕವಾಗಿ  ನಿರ್ಮಿಸಲಾಗಿತ್ತು. ಎರಡು ಹಂತಗಳಲ್ಲಿ 169 ಕಡೆ ಈ ಶೌಚಾಲಯವನ್ನು ಪ್ರಾರಂಭಿಸಿತ್ತು ಆದರೆ ಕೆಲವು ಕಡೆ ಇ ಶೌಚಾಲಯ ಕೆಟ್ಟು ನಿಂತರೆ ಮತ್ತೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ ಅನ್ನುವ ಮಾತು ಇದೆ.
 
ಬಿಬಿಎಂಪಿ ಮೊದಲ ಹಂತದಲ್ಲಿ 87 ಮತ್ತು ಎರಡನೇ ಹಂತದಲ್ಲಿ 82 ಶೌಚಾಲಯವನ್ನು ಪರಿಚಯಿಸಿತ್ತು. ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದು ಇ – ಶೌಚಾಲಯ ಪರಿಚಯಿಸಿದ ಮೇಲೆ ಕಡಿಮೆಯಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಸಾರ್ವಜನಿಕರು ಈ ಶೌಚಾಲಯವನ್ನು ಬಳಸದೆ ಅದರ ಹಿಂದೆ ಹೋಗಿ ಮೂತ್ರವಿಸರ್ಜನೆ ಮಾಡುತ್ತಿರುವುದರಿಂದ ಮತ್ತಷ್ಟು ಅವಮಾನಕ್ಕೀಡಾಗಿದೆ. 
 
 ಬೆಂಗಳೂರು ನಗರಕ್ಕೆ ಇ – ಶೌಚಾಲಯಗಳ ಅವಶ್ಯಕತೆ ಇರಲಿಲ್ಲ. ಇರುವಂತಹ ಇ – ಶೌಚಾಲಯಗಳನ್ನು ಸಾರ್ವಕನಿಕರು  ಬಳಸಿಕೊಳ್ಳುತ್ತಿಲ್ಲ . ಅಧಿಕಾರಿಗಳು ಹಣ ದೋಚುವ ನೆಪಕ್ಕೆ ಈ  ರೀತಿ ನಿರ್ಮಾಣ ಮಾಡಿ ಕೈ ಬಿಡ್ಡಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡದ್ದಾರೆ.
 
 ಎಲ್ಲಾ ಕಾರಣಗಳಿಗಾಗಿ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಬೆಂಗಳೂರು ಉತ್ತಮ ಸ್ಥಾನ ಪಡೆಯಲು ಆಗುತ್ತಿಲ್ಲ.ಕೆಲವು ಕಡೆ ಹೇಳಿಕೊಳ್ಳುವಂತಹ ಸ್ವಚ್ಛತೆ  ಇ – ಶೌಚಾಲಯಗಳಲ್ಲಿ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಯಾವ ಕ್ರಮಕ್ಕೆ ಮುಂದಾಗುತ್ತಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಮುಂದಿನ ಸುದ್ದಿ
Show comments