Webdunia - Bharat's app for daily news and videos

Install App

ಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್`ಗೆ ಹದ್ದು ಡಿಕ್ಕಿ

Webdunia
ಸೋಮವಾರ, 24 ಏಪ್ರಿಲ್ 2017 (12:04 IST)
ಸಿಎಂ ಸಿದ್ದರಾಮಯ್ಯನವರಿಗೆ ಯಾಕೋ ಹಣೆಬರಹ ಸರಿ ಇದ್ದಂತೆ ಕಾಣುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್`ಗೆ ಹದ್ದು ಡಿಕ್ಕಿ ಹೊಡೆದ ಪ್ರಕರಣ ಎಚ್ಎಎಲ್ ಏರ್`ಪೋರ್ಟ್`ನಲ್ಲಿ ನಡೆದಿದೆ.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಶ್ರವಣಬೆಳಗೊಳಕ್ಕೆ ತೆರಳಲು ಸಿದ್ಧರಾಗಿದ್ದರು. ಎಚ್`ಎಎಲ್ ಏರ್`ಪೋರ್ಟ್`ನಲ್ಲಿ ಕಾಪ್ಟರ್ ಟೇಕಾಫ್ ಆಗುತ್ತಿದ್ದಂತೆ ಹದ್ದು ಡಿಕ್ಕಿ ಹೊಡೆದಿದೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಪೈಲಟ್ ಹೆಲಿಕಾಪ್ಟರನ್ನ ಕೆಳಗಿಳಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದೆ.

ಘಟನೆ ನಡೆದಾಗ ಸಿಎಂ ಜೊತೆ ಗೃಹ ಸಚಿವ ಪರಮೆಶ್ವರ್ ಸಹ ಇದ್ದರು. ಗಟನೆಯಿಂದ ವಿಚಲಿತರಾದ ಸಿಎಂ ಮತ್ತು ಗೃಹ ಸಚಿವರು ಏರ್`ಪೋರ್ಟ್`ನಲ್ಲೇ ಉಳಿದು ಬಳಿಕ ಹಾಸನಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಸಿಎಂ ಕಾರಿನ ಮೇಲೆ ಕಾಗೆ ಕುಳಿತು ಭಾರಿ ಸುದ್ದಿಯಾಗಿತ್ತು. ಬಳಿಕ ಸಿಎಂ ಕಾರನ್ನೇ ಬದಲಿಸಿದರು ಎಂದು ಹೇಳಲಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments