Select Your Language

Notifications

webdunia
webdunia
webdunia
webdunia

ಆಳಂದ ಪಟ್ಟಣದಲ್ಲಿ ಪೊಲೀಸರ ಹದ್ದಿನ ಕಣ್ಣು

ಆಳಂದ ಪಟ್ಟಣದಲ್ಲಿ ಪೊಲೀಸರ ಹದ್ದಿನ ಕಣ್ಣು
ಕಲಬುರಗಿ , ಶುಕ್ರವಾರ, 17 ಫೆಬ್ರವರಿ 2023 (19:42 IST)
ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದುರ್ಗಾದಲ್ಲಿರೋ ಶಿವಲಿಂಗಕ್ಕೆ ಶಿವರಾತ್ರಿಯಂದು ಶಿವಲಿಂಗ ಪೂಜೆಗೆ ಕೋರ್ಟ್ ಸಮ್ಮತಿ ನೀಡಿದೆ. ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ಸಿಕ್ಕ ಹಿನ್ನೆಲೆ ಕಲಬುರಗಿಯ ಆಳಂದ ಪಟ್ಟಣದಲ್ಲಿ ಬಿಗಿ ಪೊಲೀಸ್​ ಭದ್ರತೆ ಏರ್ಪಡಿಸಲಾಗಿದೆ. ADGP ಅಲೋಕ್‌ ಕುಮಾರ್ ನೇತೃತ್ವದಲ್ಲಿ ರೂಟ್ ಮಾರ್ಚ್ ಸಿದ್ದವಾಗಿದ್ದು, ಸುಮಾರು 500ಕ್ಕೂ ಹೆಚ್ಚು ಪೊಲೀಸರಿಂದ ರೂಟ್ ಮಾರ್ಚ್‌ ನಡೆಯಲಿದೆ. ಶಿವಲಿಂಗ ಪೂಜೆಗೆ 15 ಜನರಿಗೆ ಕೋರ್ಟ್​ ಅವಕಾಶ ನೀಡಿದ್ದು, ಶಿವರಾತ್ರಿಯಂದು ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ವರ್ಷ ಶಿವರಾತ್ರಿಯಂದು ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಡಿಸಿ ಕಾರಿನ ಮೇಲೆ ಲಾಡ್ಲೇ ಮಾಶಾಕ್ ದರ್ಗಾದಲ್ಲಿ ಕೆಲ ಮುಸ್ಲಿಮರಿಂದ ಕಲ್ಲು ತೂರಾಟ ನಡೆದಿದ್ದು, ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ‌ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್​