Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಶೂಟೌಟ್: ಕಳ್ಳ ಸ್ಪಾಟ್‌ಔಟ್

ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಶೂಟೌಟ್: ಕಳ್ಳ ಸ್ಪಾಟ್‌ಔಟ್
ಬೆಂಗಳೂರು , ಶುಕ್ರವಾರ, 23 ಡಿಸೆಂಬರ್ 2016 (11:10 IST)
ನಗರದ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಬಳಿ ಕಳ್ಳತನಕ್ಕಾಗಿ ಬಂದಿದ್ದ ಕಳ್ಳನೊಬ್ಬನ ಮೇಲೆ ಸೆಕ್ಯೂರಿಟಿ ಗಾರ್ಡ್ ಗುಂಡಿನ ದಾಳಿ ನಡೆಸಿದಾಗ ಕಳ್ಳ ಬೆಟ್ಟಯ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಜೆಡಿಎಸ್ ಮುಖಂಡ ಜವರೇಗೌಡ ಮಾಲೀಕತ್ವದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ ನೇಮಿಸಲಾಗಿದ್ದ ಸೆಕ್ಯೂರಿಟಿ ಗಾರ್ಡ್‌, ಮೂವರು ಕಳ್ಳರಿಗೆ ಎಚ್ಚರಿಕೆ ನೀಡಿದರೂ ನನ್ನ ಮೇಲೆ ಏಕಾಏಕಿ ದಾಳಿ ಮಾಡಿದಾಗ ಆತ್ಮರಕ್ಷಣೆಗಾಗಿ ಗುಂಡಿನ ದಾಳಿ ನಡೆಸಿದ್ದಾಗಿ ಸೆಕ್ಯೂರಿಟಿ ಗಾರ್ಡ್ ಮೋಹನ್ ತಿಳಿಸಿದ್ದಾನೆ.
 
ಕಳ್ಳತನಕ್ಕೆ ಬಂದಿದ್ದ ಆರೋಪಿ ಬೆಟ್ಟಯ್ಯನ ಮೇಲೆ ಗಾರ್ಡ್ ಗುಂಡಿನ ದಾಳಿ ನಡೆಸುತ್ತಿದ್ದಂತೆ ಇತರ ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶದಿಂದಲೂ ಕಪ್ಪು ಹಣ ವಾಪಸ್ ತರುವ ಸಾಹಸಿ ಪ್ರಧಾನಿ ಮೋದಿ: ಸೂಲಿಬೆಲೆ