ಭೂಕಂಪ ; ಬೆಚ್ಚಿಬಿದ್ಧ ಗ್ರಾಮಸ್ಥರು!

Webdunia
ಗುರುವಾರ, 23 ಡಿಸೆಂಬರ್ 2021 (13:47 IST)
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮತ್ತೆ ಎರಡು ಬಾರಿ ಭೂಮಿ ಕಂಪಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ, ಬೈಯಪ್ಪನಹಳ್ಳಿ, ಬಂಡಹಳ್ಳಿ, ಪೆರೇಸಂದ್ರ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಮಿ ಕಂಪನವಾಗಿದೆ.
 
ನಿನ್ನೆ ಮಂಡಿಕಲ್, ಭೋಗಪರ್ತಿ ಸುತ್ತಮುತ್ತ ಭೂಕಂಪ ಸಂಭವಿಸಿತ್ತು. ಭೂ ಕಂಪನವಾಗಿ ಮನೆಯಲ್ಲಿದ್ದ ಪಾತ್ರೆ, ಸಾಮಾನುಗಳು ಅದುರಿಬಿದ್ದಿವೆ.

ಮಂಡಿಕಲ್ ಗ್ರಾಮದಲ್ಲಿ ಎರಡು ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಹೈಸ್ಕೂಲ್ ವಿಸ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ.

ಮಂಡಿಕಲ್ ಸರ್ಕಾರಿ ಹೈಸ್ಕೂಲ್ನಲ್ಲಿ ಈ ಘಟನೆ ನಡೆದಿದ್ದು, ಮತ್ತೆ ಶಾಲೆಯ ಒಳಗೆ ಹೋಗಲು ವಿದ್ಯಾರ್ಥಿಗಳ ಹಿಂದೇಟು ಹಾಕಿದ್ದಾರೆ. ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಚಿಕ್ಕಬಳ್ಳಾಫುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯಲ್ಲಿ 2 ಬಾರಿ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 2.9 ರಿಂದ 3 ರಷ್ಟು ತೀವ್ರತೆ ದಾಖಲಾಗಿತ್ತು. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಆದನ್ನಗಾರಹಳ್ಳಿ, ರೆಡ್ಡಿ ಗೊಲ್ಲವಾರಹಳ್ಳಿ, ಪೆರೇಸಂದ್ರ ಗ್ರಾಮದ ಸುತ್ತಮುತ್ತ ಸ್ಫೋಟದ ಸದ್ದು ಕೇಳಿ ಬಂದಿತ್ತು.

ಜಿಲ್ಲೆಯಲ್ಲಿ 2 ಬಾರಿ ಭೂಮಿ ಕಂಪಿಸಿದ್ದು ಲಘು ಭೂಕಂಪವಾಗಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಕೇಂದ್ರ (ಕೆ.ಎಸ್.ಎನ್.ಡಿ.ಎಂ.ಸಿ.) ಸ್ಪಷ್ಟ ಪಡಿಸಿತ್ತು. ಇಂದು ಮತ್ತೊಮ್ಮೆ ಭೂ ಕಂಪನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments