Webdunia - Bharat's app for daily news and videos

Install App

ಭೂಕಂಪ: ನಿಧಿ ಸಂಗ್ರಹಿಸಿದ ನೇಪಾಳ ವಿದ್ಯಾರ್ಥಿಗಳು

Webdunia
ಮಂಗಳವಾರ, 28 ಏಪ್ರಿಲ್ 2015 (17:58 IST)
ನೇಪಾಳದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಭೂಕಂಪ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದ್ದು, ಅವರ ನೆರವಿಗಾಗಿ ನೇಪಾಳ ಮೂಲದ ಬೆಂಗಳೂರಿನ ವಿದ್ಯಾರ್ಥಿಗಳು ಪರಿಹಾರ ನಿಧಿ ಸಂಗ್ರಹಕ್ಕೆ ಮುಂದಾಗಿದ್ದಾರೆ. 
 
ನಗರದ ಮಲ್ಲೇಶ್ವರಂ ಮೈದಾನದಿಂದ ನಗರದೆಲ್ಲೆಡೆ ಸುಮಾರು 15 ಕಿ. ಮೀ ದೂರ ಕ್ರಮಿಸಿದ ವಿದ್ಯಾರ್ಥಿಗಳು ಪರಿಹಾರ ಸಂಗ್ರಹಿಸಲು ಮುಂದಾದರು. 
 
ಈ ಪರಿಹಾರ ಸಂಗ್ರಹಣಾ ರ್ಯಾಲಿಗೆ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅಶ್ವತ್ಥ್ ನಾರಾಯಣ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ರ್ಯಾಲಿಗೆ ಚಾಲನೆ ನೀಡಿದರು. 
 
ಇನ್ನು ಈ ಪರಿಹಾರ ಸಂಗ್ರಹಣಾ ರ್ಯಾಲಿಯಲ್ಲಿ ನೇಪಾಳ ಮೂಲದ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಲ್ಲಿ ಫಾರ್ಮಸಿಸ್ಟ್‌ಗಳು, ಎಂಜಿನಿಯರ್ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿದ್ದರು. ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಂದ ನಿಧಿ ಸಂಗ್ರಹ ಮಾಡಲಾಯಿತು.    

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments