Webdunia - Bharat's app for daily news and videos

Install App

ಬಿಜೆಪಿ ಭಿನ್ನಮತ: ಯಡ್ಡಿ ವಿರುದ್ಧ ದೂರು ನೀಡಲು ಈಶ್ವರಪ್ಪ, ಸಿ.ಟಿ.ರವಿ ದೆಹಲಿಗೆ ದೌಡು

Webdunia
ಶುಕ್ರವಾರ, 29 ಜುಲೈ 2016 (13:13 IST)
ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಿಸುವಂತೆ ಪಟ್ಟು ಹಿಡಿದಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ  ಇಂದು ದೆಹಲಿಗೆ ದೌಡಾಯಿಸಿದ್ದು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿದ್ದ ಭಿನ್ನಮತ ಬೂದಿ ಮುಚ್ಚಿದ ಕೆಂಡದಂತಿದ್ದು, ಇಂದು ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ.
 
ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಣೆ ಸಂದರ್ಭದಲ್ಲಿ ತಮಗೆ ಬೇಕಾದವರಿಗೆ ಹುದ್ದೆ ನೀಡಿದ್ದು, ಪಕ್ಷಕ್ಕಾಗಿ ದುಡಿದವರನ್ನು ನಿರ್ಲಕ್ಷಿಸಲಾಗಿದೆ. ಕೋರ್ ಕಮಿಟಿಯ ಸಲಹೆಯನ್ನು ಕೇಳದೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದರು.
 
ಆಯಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಿರಿಯರ ಸಲಹೆಗಳನ್ನು ಪಾಲಿಸಲಾಗಿಲ್ಲ. ಬಿಜಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪದಾಧಿಕಾರಿಗಳ ನೇಮಕದಲ್ಲಿ ಸರ್ವಾಧಿಕಾರಿ ವರ್ತನೆ ತೋರಿದ್ದರಿಂದ ಭಿನ್ನಮತ ಎದುರಾಗಿದೆ ಎಂದು ಗುಡುಗಿದ್ದರು.
 
ಈ ಹಿಂದೆ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಯಡಿಯೂರಪ್ಪ, ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಯಾವುದೇ ಪಕ್ಷಪಾತವಾಗಿಲ್ಲ. ಯಾವುದೇ ಕಾರಣಕ್ಕೂ ಪಟ್ಟಿಯನ್ನು ಬದಲಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದರು.
 
ಇದರಿಂದ ಮತ್ತಷ್ಟು ಆಕ್ರೋಶಗೊಂಡ ಭಿನ್ನಮತೀಯರು ಈಶ್ವರಪ್ಪ ನೇತೃತ್ವದಲ್ಲಿ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ದೂರು ನೀಡಿದ್ದರು. ದೂರು ನೀಡಿದ ನಂತರವು ಯಾವುದೇ ಬದಲಾವಣೆಯಾಗದ ಹಿನ್ನೆಲೆಯಲ್ಲಿ ಇಂದು ಕೆ.ಎಸ್.ಈಶ್ವರಪ್ಪ ಮತ್ತು ಸಿ.ಟಿ.ರವಿ ದೆಹಲಿಗೆ ತೆರಳಿ ಮತ್ತೊಮ್ಮ ವರಿಷ್ಠರ ಮುಂದೆ ಯಡಿಯೂರಪ್ಪ ವಿರುದ್ಧ ದೂರು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments