ಪರೋಕ್ಷವಾಗಿ ಯಡಿಯೂರಪ್ಪಗೆ ಟಾಂಗ್ ನೀಡಿದ ಈಶ್ವರಪ್ಪ

Webdunia
ಭಾನುವಾರ, 7 ಮೇ 2017 (10:56 IST)
ರಾಜ್ಯದಲ್ಲಿ ನೀರಿನ ಸಮಸ್ಯೆಗಳು ಇರುವ ಕಡೆ ನಾವು ಹೋಗುತ್ತಿಲ್ಲ. ಬರಪರಿಸ್ಥಿತಿಯನ್ನು ಬಿಜೆಪಿ ಕೂಡಾ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾರ್ಯಕರ್ತರು ಕೂಡಾ ಜನತೆಯ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪಗೆ ಟಾಂಗ್ ನೀಡಿದರು.
 
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ನಿರ್ಣಯ ಮಂಡಿಸಿದ ಈಶ್ವರಪ್ಪ, ಸರಕಾರ ಬರಗಾಲ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ನಾವು ಕೂಡಾ ಎಡವಿದ್ದೇವೆ ಎಂದು ಅಸಮಾಧಾನ ಹೊರಹಾಕಿದರು
 
ರಾಜ್ಯ ಕಾರ್ಯಕಾರಿಣಿಯ ಎರಡನೇ ದಿನವಾದ ಇಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬರಗಾಲದ ಪರಿಸ್ಥಿತಿ ಕುರಿತು ನಿರ್ಣಯ ಮಂಡಿಸಿದರು.
 
ರಾಜ್ಯ ಸರಕಾರ ಬರಗಾಲದಿಂದಾಗಿ ಕಂಗೆಟ್ಟಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು. ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ನಾಯಕರು ಜನರ ಕಷ್ಟ ಕೇಳಬೇಕಾಗಿತ್ತು ಎಂದು ತಮ್ಮದೇ ಪಕ್ಷದ ವಿರುದ್ಧ ಗುಡುಗಿದರು.
 
ಯಡಿಯೂರಪ್ಪ ಮತ್ತು ಈಶ್ವರಪ್ಪ ಇಂದು ಕೂಡಾ ಪರಸ್ಪರ ಮಾತನಾಡದೇ ಮೌನವಹಿಸಿರುವುದು ಮುಂದುವರಿಯಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments