Webdunia - Bharat's app for daily news and videos

Install App

ಈಶ್ವರಪ್ಪ ಪಿಎ ವಿನಯ್‌ ಅಪಹರಣ ಪ್ರಕರಣ: ಬಿಎಸ್‌ವೈ ಆಪ್ತ ರಾಜೇಂದ್ರ ವಿಚಾರಣೆ

Webdunia
ಮಂಗಳವಾರ, 11 ಜುಲೈ 2017 (12:32 IST)
ಈಶ್ವರಪ್ಪ ಆಪ್ತ ಸಹಾಯಕ ವಿನಯ್‌ನನ್ನು ಅಪಹರಿಸಲು ವಿಫಲಯತ್ನ ನಡೆಸಿ ಹಲ್ಲೆಗೈದಿದ್ದ ಆರೋಪದ ಮೇಲೆ ರಾಜೇಂದ್ರ ಅರಸ್‌ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
 
ಕಳೆದ ಮೇ 11 ರಂದು ಕೆಲ ದುಷ್ಕರ್ಮಿಗಳ ತಂಡ ವಿನಯ್‌ರನ್ನು ಅಪಹರಿಸಲು ಪ್ರಯತ್ನಿಸಿತ್ತು. ಆದರೆ, ವಿನಯ್ ಜೋರಾಗಿ ಕೂಗಿದ್ದರಿಂದ ಸ್ಥಳೀಯರು ಆಗಮಿಸಿದಾಗ ಆರೋಪಿಗಳು ಪರಾರಿಯಾಗಿದ್ದರು.
 
ನಿನ್ನೆ ಸಹಾ ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸ್ ಅಧಿಕಾರಿಗಳು ರಾಜೇಂದ್ರನನ್ನು ವಿಚಾರಣೆಗೆ ಒಳಪಡಿಸಿದ್ದರು. ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಲು ಅನುವಾಗುತ್ತಿದ್ದಂತೆ ರಾಜೇಂದ್ರ ಕೋರ್ಟ್‌ನಲ್ಲಿ ಜಾಮೀನು ಪಡೆದುಕೊಂಡಿದ್ದರು.
 
ಒಂದು ಕಡೆ ಈಶ್ವರಪ್ಪ ಮತ್ತು ಯಡಿಯೂರಪ್ಪ ಮಧ್ಯೆ ಕಚ್ಚಾಟವಿದ್ದರೆ, ಮತ್ತೊಂದೆಡೆ ಅವರಿಬ್ಬರ ಆಪ್ತರ ನಡುವೆ ವೈಮನಸ್ಸಿರುವುದು ವಿಚಿತ್ರವಾಗಿದೆ. ಯಾವ ಕಾರಣಕ್ಕೆ ವಿನಯ್‌ರನ್ನು ಅಪಹರಿಸಲು ಯತ್ನಿಸಲಾಯಿತು. ಅದರಲ್ಲಿ ಯಾರು ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments