Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಸರಕಾರದ ಸಾಧನೆ ಶೂನ್ಯ: ಈಶ್ವರಪ್ಪ ವಾಗ್ದಾಳಿ

Webdunia
ಸೋಮವಾರ, 20 ಮಾರ್ಚ್ 2017 (16:49 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಹಿಸಿಕೊಂಡ ನಾಲ್ಕು ವರ್ಷಗಳ ಅವಧಿಯಲ್ಲಿ ಸರಕಾರದ ಸಾಧನೆ ಶೂನ್ಯವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ಸಿಎಂ ಸಿದ್ರಾಮಯ್ಯ ಸರಕಾರಕ್ಕೆ ನೀರಾವರಿ ಬಗ್ಗೆ ಆಸಕ್ತಿಯಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬರಗಾಲದಿಂದ ತತ್ತರಿಸಿರುವ ರೈತರಿಗೆ ಪರಿಹಾರ ಕೊಡುವ ಸೌಜನ್ಯ ಕೂಡಾ ಸರಕಾರ ತೋರಿಲ್ಲ ಎಂದು ಕಿಡಿಕಾರಿದರು.
 
ಕಾಟಾಚಾರಕ್ಕೆ ಸರಕಾರ ಬಜೆಟ್ ಮಂಡಿಸಿದೆ. ನೀರಾವರಿ ಯೋಜನೆಗಳ ಬಗ್ಗೆ ಸರಕಾರ ದಿವ್ಯ ಅಸಡ್ಡೆ ತೋರಿದೆ. ಹಿಂದಿನ ಯೋಜನೆಗಳನ್ನು ಪೂರ್ಣಗೊಳಿಸದ ಸರಕಾರ ಹೊಸ ಯೋಜನೆಗಳನ್ನು ಘೋಷಿಸಿದೆ ಎಂದು ಲೇವಡಿ ಮಾಡಿದ್ದಾರೆ.
 
ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಕಾಮಗಾರಿ ಆರಂಭಿಸದಿದ್ದರೂ ಹಣ ವೆಚ್ಚವಾಗಿದೆ ಎನ್ನುವುದನ್ನು ಸರಕಾರ ತೋರಿಸುತ್ತಿದೆ. ಮಹದಾಯಿ ಯೋಜನೆಯಲ್ಲಿ ಪಕ್ಷಾತೀತವಾಗಿ ಪರಿಹರಿಸದೆ ಅದರಲ್ಲೂ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ಸರಕಾರದಲ್ಲಿ ಕಂಟ್ರ್ಯಾಕ್ಟರ್‌ಗಳು ಸೇರಿದಂತೆ ಯಾರಿಗೂ ಭಯವಿಲ್ಲದಂತಾಗಿದೆ. ಕಪ್ಪು ಪಟ್ಟಿಯಲ್ಲಿ ಹಾಕಿದರೆ ದಾರಿಗೆ ಬರ್ತಾರೆ. ಹಣ ಎಲ್ಲಿ ಹರಿದು ಹೋಗುತ್ತಿದೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments