Webdunia - Bharat's app for daily news and videos

Install App

ವಾಲ್ಮೀಕಿ ನಿಗಮದಲ್ಲಿ ಮಾಜಿ ಸಚಿವ ನಾಗೇಂದ್ರ ಪಾತ್ರದ ಬಗ್ಗೆ ಇಡಿ ಮಹತ್ವದ ಹೇಳಿಕೆ

Krishnaveni K
ಮಂಗಳವಾರ, 10 ಸೆಪ್ಟಂಬರ್ 2024 (14:03 IST)
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಇದೀಗ ಮಾಜಿ ಸಚಿವ ನಾಗೇಂದ್ರ ಪಾತ್ರದ ಬಗ್ಗೆ ಮಹತ್ವದ ಹೇಳಿಕೆ ನೀಡಿದೆ.

ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಣಕಾಸಿನ ಅವ್ಯವಹಾರ ನಡೆದಿದೆ ಎಂದು ಅರೋಪಿಸಲಾಗಿದೆ. ಈ ಸಂಬಂಧ ತನಿಖೆ ನಡೆಸಿದ್ದ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ ಮಾಜಿ ಸಚಿವ ನಾಗೇಂದ್ರಗೆ ಕ್ಲೀನ್ ಚಿಟ್ ನೀಡಿತ್ತು. ಆದರೆ ಹಣಕಾಸಿನ ಅವ್ಯವಹಾರವನ್ನು ಇಡಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆಗೆ ಮುಂದಾಗಿತ್ತು.

ಇದೀಗ ಇಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ನಾಗೇಂದ್ರ ಪಾತ್ರವಿರುವುದು ನಿಜವೆಂದು ಹೇಳಿದ್ದಾರೆ. ನಾಗೇಂದ್ರ ಅಣತಿಯಂತೇ ಹಣಕಾಸಿನ ವ್ಯವಹಾರ ನಡೆದಿದೆ ಎಂದು ಇಡಿ ಹೇಳಿಕೆ ನೀಡಿದೆ. ತನಿಖೆ ನಡೆಸಿದ ಇಡಿ ಅಧಿಕಾರಿಗಳು ಇದೀಗ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರಲ್ಲಿ ನಾಗೇಂದ್ರ ಪಾತ್ರದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.

ಹಗರಣದಲ್ಲಿ ನಾಗೇಂದ್ರ ಪ್ರಮುಖ ಆರೋಪಿ. ಅವರು ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಎಂಡಿ ಸತ್ಯನಾರಾಯಣ ಜೊತೆ ಸ್ನೇಹ ಹೊಂದಿದ್ದರು. ನಾಗೇಂದ್ರ ಅಣತಿಯಂತೆ ಹಣಕಾಸಿನ ವ್ಯವಹಾರ ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭೆ ಚುನಾವಣೆಗೆ ಬಳಸಲಾಗಿದೆ ಎಂಬ ಅಂಶವನ್ನೂ ಉಲ್ಲೇಖಿಸಲಾಗಿದೆ. ನಾಗೇಂದ್ರ ಸೇರಿ ಐವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments