Webdunia - Bharat's app for daily news and videos

Install App

ಮುಡಾ ಕಚೇರಿಯಲ್ಲೇ ರಾತ್ರಿ ಝಾಂಡಾ ಹೊಡೆದು ಕಡತಗಳನ್ನು ಹುಡುಕಿ ಹುಡುಕಿ ತೆಗೆಯುತ್ತಿರುವ ಇಡಿ ಅಧಿಕಾರಿಗಳು

Krishnaveni K
ಶನಿವಾರ, 19 ಅಕ್ಟೋಬರ್ 2024 (09:37 IST)
Photo Credit: X
ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಇಡಿ) ದ ಮೇಲೆ ಅವ್ಯವಹಾರ ಆರೋಪ ಹಿನ್ನಲೆಯಲ್ಲಿ ದಾಳಿ ನಡೆಸುತ್ತಿರುವ ಇಡಿ ಅಧಿಕಾರಿಗಳು ರಾತ್ರಿಯೂ ಕಚೇರಿಯಲ್ಲೇ ಉಳಿದುಕೊಂಡು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

ಮುಡಾ ಕಚೇರಿ ಮತ್ತು ಮುಡಾ ಪ್ರಕರಣದ ಎ4 ಆರೋಪಿ ದೇವರಾಜು ಮನೆ ಮೇಲೆ ನಿನ್ನೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಕಡತಗಳ ಪರಿಶೀಲನೆ ಆರಂಭಿಸಿದ್ದರು. ನಿನ್ನೆ ರಾತ್ರಿಯೂ ಮುಡಾ ಕಚೇರಿಯಲ್ಲೇ ಕಳೆದು ನಿರಂತರವಾಗಿ ಕಡತ ಪರಿಶೀಲನೆ ನಡೆಸುತ್ತಲೇ ಇದ್ದಾರೆ. ಮುಡಾದಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರವಾಗಿದೆ ಎಂದು ಆರೋಪ ಬಂದಿದೆ.

ಈ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ನೀಡಲಾಗಿದ್ದ 14 ಸೈಟುಗಳ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದಾರೆ. ಇಂದೂ ಕೂಡಾ ಮುಡಾ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿಯಲಿದೆ.

ಸಿದ್ದರಾಮಯ್ಯ ಪತ್ನಿಗೆ ಬದಲಿ ಸೈಟು ನೀಡಿದ ವಿಚಾರದ ಬಗ್ಗೆಯೇ ಇಡಿ ಅಧಿಕಾರಿಗಳು ವಿಶೇಷವಾಗಿ ದೇವರಾಜು ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಸುಮಾರು 41 ಪ್ರಶ್ನೆಗಳನ್ನು ಕೇಳಿದ್ದಾರೆ. ಇವುಗಳಿಗೆ ದಾಖಲೆಗಳನ್ನು ನೀಡಲು ಸೂಚಿಸಿದ್ದಾರೆ. ಒತ್ತುವರಿ ಪರಿಹಾರವಾಗಿ ನೀಡಿರುವ ಜಮೀನಿಗೆ ಮಾನದಂಡಗಳೇನು ಎಂದು ಪ್ರಶ್ನೆ ಮಾಡಿದ್ದಾರೆ. ಇಂದೂ ಕೂಡಾ ಇಡಿ ಗ್ರಿಲ್ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments