ED Raid: ಗೃಹಸಚಿವ ಡಾ ಜಿ ಪರಮೇಶ್ವರ್ ಬುಡಕ್ಕೇ ಬಂತು ಇಡಿ: ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ದಾಳಿ

Krishnaveni K
ಬುಧವಾರ, 21 ಮೇ 2025 (11:57 IST)
ತುಮಕೂರು: ಗೃಹಸಚಿವ ಡಾ ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದ್ದು, ಸ್ವತಃ ಸಚಿವರಿಗೇ ಸಂಕಷ್ಟ ಬಂದೊರಗಿದೆ.

ಇಂದು ಬೆಳಿಗ್ಗೆಯೇ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಮೆಡಿಕಲ್ ಕಾಲೇಜು, ಎಸ್ಎಸ್ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ.

ಅಲ್ಲದೆ ನೆಲಮಂಗಲದ ಟಿ ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ದಾಳಿ ನಡೆದಿದೆ. ಈಗಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಪಾಸಣೆ ಮುಂದುವರಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿವೈಎಸ್ ಪಿ ನೇತೃತ್ವದಲ್ಲಿ ಕಾಲೇಜಿಗೆ ಭದ್ರತೆ ನೀಡಲಾಗಿದೆ.

ಕಾಲೇಜಿನ ಒಳಗೆ ಯಾರೂ ಬಾರದಂತೆ ಇಡಿ ಅಧಿಕಾರಿಗಳು ನಿರ್ಬಂಧ ವಿಧಿಸಿದ್ದಾರೆ. ಇದರೊಂದಿಗೆ ಇಡಿ ಅಧಿಕಾರಿಗಳು ಗೃಹಸಚಿವ ಪರಮೇಶ್ವರ್ ಗೆ ಬೆಳಿಗ್ಗೆಯೇ ಬಿಗ್ ಶಾಕ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments