Webdunia - Bharat's app for daily news and videos

Install App

ಜಮೀರ್ ಅಹ್ಮದ್ ಮನೆ ಮೇಲೆ ED Raid ಅಂತ್ಯ

Webdunia
ಶುಕ್ರವಾರ, 6 ಆಗಸ್ಟ್ 2021 (08:40 IST)
ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಕಚೇರಿ ಮೇಲೆ ನಡೆದಿದ್ದ ಇ.ಡಿ ಅಧಿಕಾರಿಗಳ ದಾಳಿ ಅಂತ್ಯಗೊಂಡಿದೆ. ಸತತ 23 ಗಂಟೆಗಳ ಕಾಲ ನಡೆದ ಶೋಧದ ಬಳಿಕ ಇಡಿ ಅಧಿಕಾರಿಗಳು ಜಮೀರ್ ಮನೆಯಿಂದ ವಾಪಸ್ ಹೋಗಿದ್ದಾರೆ.

ನಿನ್ನೆ ಮುಂಜಾನೆ ಆರು ಗಂಟೆಗೆ ಇನೋವಾ ಕಾರ್ನಲ್ಲಿ ಜಮೀರ್ ಖಾನ್ ಮನೆಗೆ ಬಂದಿದ್ದ ಆರು ಜನ ಇಡಿ ಅಧಿಕಾರಿಗಳ ತಂಡ ಸತತ 23 ಗಂಟೆಗಳ ಕಾಲ ಶೋಧ ನಡೆಸಿತ್ತು. ಒಟ್ಟು ನಾಲ್ಕು ಕಾರುಗಳಲ್ಲಿ ಬಂದಿದ್ದ ಇಡಿ ಅಧಿಕಾರಿಗಳ ತಂಡ ಸಿಆರ್ಪಿಎಫ್ ಸಿಬ್ಬಂದಿಯೊಂದಿಗೆ ಜಮೀರ್ ಮನೆ, ಕಚೇರಿ, ಫ್ಲ್ಯಾಟ್, ಅವರ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಸೇರಿದಂತೆ ವಿವಿಧೆಡೆ ದಾಖಲೆಗಳನ್ನು ಪರಿಶೀಲನೆ ನಡೆಸಿತ್ತು. ಅಧಿಕಾರಿಗಳ ಪರಿಶೀಲನೆ ಮುಗಿದ ನಂತರ ಮನೆಯಿಂದ ಹೊರಬಂದ ಶಾಸಕ ಜಮೀರ್ ಅಹಮದ್ ಖಾನ್ ಮೊದಲ ಬಾರಿಗೆ ಈ ಬಗ್ಗೆ ಮಾತನಾಡಿದ್ದಾರೆ.
ದಾಳಿ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಜಮೀರ್, ‘ನಾನು ಇಡಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಅವರು ಕೇಳಿದ ಮಾಹಿತಿ, ದಾಖಲೆ ಕೊಟ್ಟಿದ್ದೇನೆ. ಆದರೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿಲ್ಲ. ನನ್ನ ಮನೆ ವಿಚಾರಕ್ಕೆ ಹಲವು ದೂರು ಬಂದಿದೆ, ಅದಕ್ಕೆ ಬಂದಿದ್ದಾರೆ. ನಾನು ನನ್ನ ಮನೆಯನ್ನು ಸಂಪೂರ್ಣವಾಗಿ ಅಧಿಕೃತ ಹಣದಿಂದಲೇ ಕಟ್ಟಿರುವುದು. ಈ ಬಗ್ಗೆ ಎಲ್ಲಾ ದಾಖಲೆ ತೋರಿಸಿದ್ದೇನೆ, ನಾನು ನೀಡಿದ ದಾಖಲೆಗೆ ಸಮಾಧಾನ ಆಗಿ ಹೋಗಿದ್ದಾರೆ. ಇಡಿ ಅಧಿಕಾರಿಗಳು ಮನೆಯನ್ನು ಸಂಪೂರ್ಣವಾಗಿ ಸರ್ಚ್ ಮಾಡಿದ್ದಾರೆ, ನನ್ನ ಹಾಗೂ ನನ್ನ ಸಹೋದರರ ಮನೆಯಲ್ಲೂ ಸರ್ಚ್ ಮಾಡಿದ್ದಾರೆ. ಆದರೆ ಅವರಿಗೆ ಏನೂ ಸಿಕ್ಕಿಲ್ಲ. ಮನೆ ಯಾವಾಗ ತಗೊಂಡ್ರಿ, ಪೇಮೆಂಟ್ ಹೇಗೆ ಮಾಡಿದ್ರಿ ಅಂತ ಪ್ರಶ್ನೆಗಳನ್ನು ಕೇಳಿದ್ರು ಎಂದು ಜಮೀರ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments