Webdunia - Bharat's app for daily news and videos

Install App

ವರ್ಷಕ್ಕೆ 3 ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ : ಹೊಸ ವ್ಯವಸ್ಥೆ ಹೇಗೆ?

Webdunia
ಶುಕ್ರವಾರ, 8 ಸೆಪ್ಟಂಬರ್ 2023 (09:43 IST)
ಬೆಂಗಳೂರು : ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ವ್ಯವಸ್ಥೆಯಲ್ಲಿ ಹೊಸ ವಿಧಾನ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ಮುಂದೆ ಒಂದು ವರ್ಷದಲ್ಲಿ ಮೂರು ವಾರ್ಷಿಕ ಪರೀಕ್ಷೆ ನಡೆಸಲು ಇಲಾಖೆ ನಿರ್ಧರಿಸಿದೆ.

ದ್ವೀತಿಯ ಪಿಯುಸಿ ಮತ್ತು SSLC ಪರೀಕ್ಷೆಗಳನ್ನ ವರ್ಷದಲ್ಲಿ 3 ಬಾರಿ ಮಾಡಲು ನಿರ್ಧರಿಸಲಾಗಿದೆ. ವಾರ್ಷಿಕ ಪರೀಕ್ಷೆ, ಪೂರಕ ಪರೀಕ್ಷೆ ವ್ಯವಸ್ಥೆ ಕೈಬಿಡಲಾಗುವುದು. ಪರೀಕ್ಷೆ 1, ಪರೀಕ್ಷೆ 2, ಪರೀಕ್ಷೆ 3 ಹೆಸರಿನಲ್ಲಿ ಪರೀಕ್ಷೆ ನಡೆಸಲಾಗುವುದು. ಈ ವರ್ಷದಿಂದ ಹೊಸ ವ್ಯವಸ್ಥೆ ಜಾರಿಯಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

* ವಿದ್ಯಾರ್ಥಿಗಳು ಒಂದು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರೆ ಇನ್ನೊಂದು ಪರೀಕ್ಷೆ ಬರೆಯಬಹುದು. ಅದರಲ್ಲಿ ಕಡಿಮೆ ಬಂದರೆ 3 ನೇ ಪರೀಕ್ಷೆ ಬರೆಯಬಹುದು.

* 2 ಮತ್ತು 3 ನೇ ಪರೀಕ್ಷೆಯಲ್ಲಿ ಮೊದಲ ಪರೀಕ್ಷೆಗಿಂತ ಕಡಿಮೆ ಅಂಕ ಬಂದಿದ್ದರೆ, ಎರಡು ಪರೀಕ್ಷೆ ಬರೆದರೂ ಮೊದಲ ಪರೀಕ್ಷೆಯ ಅಂಕಗಳನ್ನೆ ಉಳಿಸಿಕೊಳ್ಳಬಹುದು.
* ಯಾವುದಾದರೂ ಒಂದು ವಿಷಯದಲ್ಲಿ ಕಡಿಮೆ ಅಂಕ ಬಂದಿದೆ ಅಂತ ಅನ್ನಿಸಿದರೆ ಅ ವಿದ್ಯಾರ್ಥಿಯೂ 2 ಮತ್ತು ಮೂರನೇ ಪರೀಕ್ಷೆಯಲ್ಲಿ ಆ ಒಂದು ವಿಷಯವನ್ನು ಪ್ರತ್ಯೇಕವಾಗಿ ಬರೆದು ಹೆಚ್ಚು ಅಂಕ ಪಡೆದುಕೊಳ್ಳಬಹುದು.
* ಮೊದಲ ಪರೀಕ್ಷೆಯಲ್ಲಿ ಫೇಲ್ ಆದರೂ ಅ ವಿದ್ಯಾರ್ಥಿಯನ್ನ ಫೇಲ್ ಅಂತ ಕರೆಯುವುದಿಲ್ಲ. ಆತ 2, 3 ನೇ ಪರೀಕ್ಷೆ ಬರೆದು ಪಾಸ್ ಆಗಬಹುದು.
* ವಿದ್ಯಾರ್ಥಿ 1, 2, 3 ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಪಾಸ್ ಆಗಿರುತ್ತಾನೋ ಅ ಪರೀಕ್ಷೆಯಲ್ಲಿ ಪಾಸ್ ಅಂತ ಅಂಕಪಟ್ಟಿ ನೀಡಲಾಗುತ್ತದೆ.
* 2023-24ನೇ ಸಾಲಿನಿಂದ ಹೊಸ ವ್ಯವಸ್ಥೆ ಜಾರಿಯಾಗಲಿದೆ.

ಹೊಸ ಪರೀಕ್ಷೆ ವ್ಯವಸ್ಥೆ ವೇಳಾಪಟ್ಟಿ
ಪರೀಕ್ಷೆ 1
ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ
ಫಲಿತಾಂಶ ಮೇ 8
ಪರೀಕ್ಷೆ 2
ಜೂನ್ 12 ರಿಂದ ಜೂನ್ 19
ಜೂನ್ 29 ಫಲಿತಾಂಶ
ಪರೀಕ್ಷೆ 3
ಜುಲೈ 29 ರಿಂದ ಆಗಸ್ಟ್ 5
ಆಗಸ್ಟ್ 19 ಫಲಿತಾಂಶ

ದ್ವೀತಿಯ ಪಿಯುಸಿ ವೇಳಾಪಟ್ಟಿ
ಪರೀಕ್ಷೆ 1
ಮಾರ್ಚ್ 1 ರಿಂದ ಮಾರ್ಚ್ 25
ಫಲಿತಾಂಶ ಏಪ್ರಿಲ್ 22
ಪರೀಕ್ಷೆ 2
ಮೇ 15 ರಿಂದ ಜೂನ್ 5
ಜೂನ್ 21 ಫಲಿತಾಂಶ
ಪರೀಕ್ಷೆ 3
ಜುಲೈ 12 ರಿಂದ ಜುಲೈ 30
ಆಗಸ್ಟ್ 16 ಫಲಿತಾಂಶ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments