ಶಿಕ್ಷಣ ಸಚಿವ ಬಿಸಿ ನಾಗೇಶ್‌ ಹೇಳಿದ್ದು ಹಸಿಸುಳ್ಳು: ಸಾಹಿತಿ ಬರಗೂರು ರಾಮಚಂದ್ರಪ್ಪ

Webdunia
ಮಂಗಳವಾರ, 24 ಮೇ 2022 (14:40 IST)
ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಕಿಡಿ ಕಾರಿದ್ದಾರೆ.
ನಮ್ಮ ಸಮಿತಿ ನಡೆಸಿದೆ ಎನ್ನಲಾಗುವ ಬಗ್ಗೆ ಹಸಿ ಸುಳ್ಳುಗಳನ್ನು ಹೇಳಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಮಾಜಿ ಅಧ್ಯಕ್ಷರಾದ ಬರಗೂರು ರಾಮಚಂದ್ರಪ್ಪ, ಬಿಸಿ ನಾಗೇಶ್ ಅವರು ನಾವು ಪಠ್ಯದಿಂದ ಗಾಂಧಿ, ಕುವೆಂಪು, ಅಂಬೇಡ್ಕರ್, ಮದಕರಿ ನಾಯಕ, ರಾಣಿ ಅಬ್ಬಕ್ಕ, ಕೆಂಪೇಗೌಡರು ಮುಂತಾದವ ಪಠ್ಯ ಕೈ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ. ಆದರೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಹಸಿ ಸುಳ್ಳು ಹೇಳಿದ್ದಾರೆ.
ಕುವೆಂಪು, ಇವರನ್ನೆಲ್ಲಾ ಬಿಟ್ಟು ಪಠ್ಯ ಪುಸ್ತಕ ಮಾಡಲು ಸಾಧ್ಯವೇ..? ಕುಂವೆಪು ಅವರಿಗೆ ಸಂಬಂಧಿಸಿದಂತೆ ಒಂದು ಪಾಠ 10ನೇ ತರಗತಿಯಲ್ಲಿತ್ತು, ಏಳನೇ ತರಗತಿಯಲ್ಲಿತ್ತು. ಗಾಂಧಿಜಿಗೆ ಸಂಬಂಧಿಸಿದ ಪಾಠ ಏಳನೇ ತರಗತಿಯ ಸಮಾಜ ವಿಜ್ಞಾನದ ಭಾಗ 2ರಲ್ಲಿತ್ತು, 10ನೇ ತರಗತಿಯ ಸಮಾಜ ವಿಜ್ಞಾನ ಭಾಗ 2 ರಲ್ಲಿತ್ತು. ಅಂಬೇಡ್ಕರ್ ಅವರ ಬಗ್ಗೆ 8,9,10ನೇ ತರಗತಿಯ ಪಠ್ಯದಲ್ಲಿತ್ತು. ಹೀಗೆ ವೀರ ಮದಕರಿ, ಸಂಗೊಳ್ಳಿ ರಾಯಣ್ಣ, ಕೆಂಪೇಗೌಡರು, ಅಬ್ಬಕ್ಕ ರಾಣಿ ಬಗ್ಗೆಯೂ 4,5,6,7ನೇ ತರಗತಿಯ ಪಠ್ಯದಲ್ಲಿ ಹಾಕಲಾಗಿತ್ತು. ಮೈಸೂರು ರಾಜರ ಬಗ್ಗೆ ಮಾಹಿತಿ ಕಡಿಮೆ ಇತ್ತು ಅಂತ ಸಚಿವರು ಹೇಳಿದ್ದಾರೆ. ಕಡಿಮೆ ಇದ್ದರೆ ಪರಿಷ್ಕರಣೆ ಮಾಡಿ ಮಾಹಿತಿ ಹೆಚ್ಚಿಸಬಹುದಿತ್ತು ಅಲ್ಲವೇ..? ಅದನ್ನು ಮಾಡಿದರೇ..? 
ಟಿಪ್ಪು ಸುಲ್ತಾನ್ ಬಗ್ಗೆ ವೈಭವೀಕರಿಸಲಾಗಿದೆ ಎಂದು ಹೇಳ್ತಿದ್ದಾರೆ. ವಾಸ್ತವದಲ್ಲಿ ಮೈಸೂರು ಒಡೆಯರ ಬಗ್ಗೆ ಸೇರಿಸಲಾಗಿದ್ದ ಭಾಗದಲ್ಲಿ ಬ್ರಿಟೀಷರೊಡನೆ ನಡೆಸಲಾದ ಯುದ್ಧಗಳ ಬಗ್ಗೆ ಹೇಳಲಾಗಿದೆ. ಈ ಯುದ್ಧಗಳ ವಿಚಾರ ಬಂದಾಗ ಟಿಪ್ಪು ಸುಲ್ತಾನ್ ಹಾಗೂ ಹೈದರ್ ಅಲಿ ಬಗ್ಗೆ ಮಾಹಿತಿ ನೀಡಲಾಗಿದೆ. ಅದರ ಹೊರತಾಗಿ ವಿಶೇಷವಾದ ಅಧ್ಯಾಯ ಟಿಪ್ಪು ಸುಲ್ತಾನ್ ಗೆ ಬರೆಯಲಾಗಿಲ್ಲ.‌ ಇವರು ಇಂಥಾ ಕಾರಣ‌ ಕೊಟ್ಟು ಅವರಿಗೆ ಬೇಕಾದ ಪಠ್ಯ ಸೇರಿಸಿ ವಿವಾದ ಹುಟ್ಟು ಹಾಕಿದ್ದಾರೆ. ಹೀಗೆ ಪತ್ರಿಕಾಗೋಷ್ಠಿ ನಡೆಸಿ ಶಿಕ್ಷಣ ಸಚಿವರು ಹೇಳಿದ್ದೆಲ್ಲವೂ ಸುಳ್ಳು. ಸತ್ಯ ಏನು ಅಂತ ನನ್ನ ಬಳಿ ದಾಖಲೆ ಸಮೇತ ಇದೆ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments