Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

Minister Madhu Bangarappa

Sampriya

ಚಿಕ್ಕಮಗಳೂರು , ಭಾನುವಾರ, 7 ಡಿಸೆಂಬರ್ 2025 (13:49 IST)
ಚಿಕ್ಕಮಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಿದೆ ಎಂದು ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಗುಡ್‌ನ್ಯೂಸ್ ನೀಡಿದ್ದಾರೆ. 

ಕೊಪ್ಪ ತಾಲ್ಲೂಕಿನ ಮೆಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹೊಸದಾಗಿ ನಿರ್ಮಿಸಲಾದ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ, 10 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮೊಟ್ಟೆಗಳ ಪೂರೈಕೆಯನ್ನು ವಿಸ್ತರಿಸುವುದರ ಜೊತೆಗೆ, ಶೂ ಮತ್ತು ಸಾಕ್ಸ್‌ಗಳ ಪೂರೈಕೆ ಹಾಗೂ, ಉಚಿತ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ನೀಡಲಾಗುವುದು ಎಂದರು.

ಇನ್ನೂ ವಿದ್ಯಾರ್ಥಿಗಳ ಪೋಷಣೆಯನ್ನು ಸುಧಾಸುವ ನಿಟ್ಟಿನಲ್ಲಿ ಹಾಲು ಮತ್ತು ರಾಗಿ ಜೊತೆಗೆ ಮೊಟ್ಟೆಗಳನ್ನು ಒದಗಿಸುತ್ತೇವೆ. 

ರಾಜ್ಯದಲ್ಲಿ ಸುಮಾರು 57 ಲಕ್ಷ ವಿದ್ಯಾರ್ಥಿಗಳಿಗೆ ಪ್ರಸ್ತುತ ಮಧ್ಯಾಹ್ನದ ಊಟವನ್ನು ನೀಡಲಾಗುತ್ತಿದೆ ಎಂದು ಬಂಗಾರಪ್ಪ ಹೇಳಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ