Select Your Language

Notifications

webdunia
webdunia
webdunia
webdunia

ಧೈರ್ಯದಿಂದ ಮಕ್ಕಳು ಪರೀಕ್ಷೆ ಬರೆಯಬೇಕು- ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರೆ

ಧೈರ್ಯದಿಂದ ಮಕ್ಕಳು ಪರೀಕ್ಷೆ ಬರೆಯಬೇಕು- ಶಿಕ್ಷಣ ಸಚಿವ ಸುರೇಶ್ ಕುಮಾರ್  ಕರೆ
ಬೆಂಗಳೂರು , ಗುರುವಾರ, 25 ಜೂನ್ 2020 (09:31 IST)
Normal 0 false false false EN-US X-NONE X-NONE

ಬೆಂಗಳೂರು : ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಪ್ರಾರಂಭವಾದ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವರು ಭೇಟಿ ನೀಡಿದ್ದಾರೆ.
 

ಶಿಕ್ಷಣ ಸಚಿವ ಸುರೇಶ್ ಕುಮಾರ್  ರಾಜಾಜಿನಗರದ ಪ್ಲಾರೆನ್ಸ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಸಿದ್ಧತಾ ಕಾರ್ಯ ಪರಿಶೀಲನೆ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ವಿದ್ಯಾರ್ಥಿಗಳು ಹೆದರುವುದು ಬೇಡ. ಧೈರ್ಯದಿಂದ ಬನ್ನಿ ಆತಂಕ, ಭಯ ಬಿಡಿ. ಪರೀಕ್ಷಾ ಕೇಂದ್ರವಲ್ಲ ಸುರಕ್ಷಾ ಕೇಂದ್ರ. ಧೈರ್ಯದಿಂದ ಮಕ್ಕಳು ಪರೀಕ್ಷೆ ಬರೆಯಬೇಕು ಎಂದು ಹೇಳಿದ್ದಾರೆ.
 

ಮಕ್ಕಳನ್ನ ಮನೆಗೆ ತಲುಪಿಸುವ ಹೊಣೆ ನಮ್ಮದು. ಪೋಷಕರಿಗೆ ಆತಂಕ, ಧಾವಂತ ಇರೋದು ಗೊತ್ತು. ಮಕ್ಕಳನ್ನು ಬಿಟ್ಟು ಮನೆಗೆ ಹೋಗಿ, ಗುಂಪು ಬೇಡ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಕ್ಕಳ ಮೇಲೆ ನಾಡಿನ ಜನರ ಆಶೀರ್ವಾದ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಎಸ್.ಎಸ್.ಎಲ್.ಸಿ. ಪರೀಕ್ಷೆ ನಡುವೆ ಲಾಕ್ ಡೌನ್ ಮಾಡುತ್ತಾ ಸರ್ಕಾರ?