Webdunia - Bharat's app for daily news and videos

Install App

ರಾಜ್ಯದ ಶಿಕ್ಷಣ ಸಚಿವರಿಗೆ ಪ್ರತಿ ವರ್ಷ 5-10 ಕೋಟಿ ರೂ ಕಪ್ಪ.: ಪ.ಯು.ಗಣೇಶ್ ಗಂಭೀರ ಆರೋಪ

Webdunia
ಬುಧವಾರ, 19 ಜುಲೈ 2017 (15:29 IST)
ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ವಾರ್ಷಿಕವಾಗಿ 5-10 ಕೋಟಿ ರೂಪಾಯಿ ಕಪ್ಪವನ್ನು ಸಂದಾಯ ಮಾಡುತ್ತಿವೆ ಎನ್ನುವ ಗಂಭೀರ ಆರೋಪವನ್ನ ಹೊಸಪೇಟೆ ಭ್ರಷ್ಟಾಚಾರ ಮುಕ್ತ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಪ.ಯು.ಗಣೇಶ್ ಮಾಡಿದ್ದಾರೆ. ಈ ಸಂಬಂಧಿತ ಸಿಡಿಯೊಂದನ್ನ ಮಾಧ್ಯಮಗಳ ಮುಂದಿಟ್ಟಿದ್ದಾರೆ
 
ಹೊಸಪೇಟೆಯ ಚೈತನ್ಯ ಟೆಕ್ನೋ ಸಂಸ್ಥೆಯ ಅಡಳಿತಾಧಿಕಾರಿ ವೆಂಕಟಶಿವು ಅವರೊಂದಿಗೆ ಗಣೇಶ್ ನಡೆಸಿದ ಸ್ಟ್ರಿಂಗ್ ಆಪರೇಶನ್‌ನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ಸ್ಫೋಟಗೊಂಡಿದೆ. 
 
ರಾಜ್ಯದಲ್ಲಿ ಖಾಸಗಿಯಾಗಿ 400 ಕಾಲೇಜುಗಳು, 300 ಶಾಲೆಗಳಿವೆ. ಹೊಸಪೇಟೆಯ ಚೈತನ್ಯ ಟೆಕ್ನೋ ಸಂಸ್ಥೆ, ಬಿರ್ಲಾ ಗ್ರೂಪ್ ಆಫ್ ಸ್ಕೂಲ್‌ ಸೇರಿದಂತೆ ಸಾವಿರಾರು ಖಾಸಗಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಂದ ವಾರ್ಷಿಕವಾಗಿ ಸಾವಿರಾರು ಕೋಟಿ ರೂ.ದೇಣಿಗೆ ಸಂಗ್ರಹಿಸುತ್ತಿವೆ. ಸಂಗ್ರಹಿಸಿದ ಹಣದಲ್ಲಿ ಅಲ್ಪ ಹಣವನ್ನು ಸರಕಾರಕ್ಕೆ, ಶಿಕ್ಷಣ ಸಚಿವರಿಗೆ ನೀಡಲಾಗುತ್ತದೆ ಎನ್ನುವದು ಆರೋಪ.
 
 ಚುನಾವಣೆಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾರ್ಟಿ ಫಂಡ್ ನೀಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಣ ಸಚಿವರು ಸೇರಿದಂತೆ ಸರಕಾರಕ್ಕೆ ಹಣ ಸಂದಾಯ ಮಾಡಲಾಗುತ್ತದೆ ಎನ್ನುವ ಆಘಾತಕಾರಿ ಅಂಶವನ್ನು ಚೈತನ್ಯ ಟೆಕ್ನೋ ಸಂಸ್ಥೆಯ ಅಡಳಿತಾಧಿಕಾರಿ ವೆಂಕಟಶಿವು ನೀಡಿದ ಹೇಳಿಕೆ ಮೊಬೈಲ್ ರಿಕಾರ್ಡಿಂಗ್‌ನಲ್ಲಿ ದಾಖಲಾಗಿದೆ ಎನ್ನಲಾಗಿದೆ.. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಕರಾಚಿ ಬಂದರು ಪುಡಿಗಟ್ಟಿದ ಐಎನ್ಎಸ್ ವಿಕ್ರಾಂತ್ ವಿಡಿಯೋ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

ಮುಂದಿನ ಸುದ್ದಿ
Show comments