ಎಎಪಿಯಿಂದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಗೆ ಮುತ್ತಿಗೆ

Webdunia
ಬುಧವಾರ, 14 ಜುಲೈ 2021 (14:56 IST)
ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ನೀಡದೇ ಸತಾಯಿಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಎಪಿಯ ನೂರಾರು ಕಾರ್ಯಕರ್ತರು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಗೆ ಬುಧವಾರ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
 
ಬೆಂಗಳೂರಿನ ಮಲ್ಲೇಶ್ವರಂ ವೃತ್ತದ ಸಮೀಪವಿರುವ ಮಂಡಳಿಯ ಕಚೇರಿಯ ಎದುರು ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ವಿರುದ್ಧ ಘೋಷಣೆ ಕೂಗಿದರು. ಅಸಮರ್ಥ ಶಿಕ್ಷಣ ಸಚಿವ, ಬಹು ಅಂಗಾಂಗ ವೈಕಲ್ಯದಿಂದ ಬಳಲುತ್ತಿರುವ ಸರ್ಕಾರ ಎಂದು ಬರೆದಿದ್ದ ಫಲಕ ಹಿಡಿದು ಪ್ರತಿಭಟನೆ ನಡೆಸಿದರು. 
 
ಖಾಸಗಿ ಶಾಲೆಗಳ ವಿರುದ್ಧ ಗೂಂಡಾ ಕಾಯ್ದೆಯಿಡಿ ಕ್ರಮ ಕೈಗೊಳ್ಳಬೇಕು ಹಾಗೂ ಆನ್‌ಲೈನ್‌ ಮೂಲಕ ಪ್ರವೇಶಪತ್ರ ಕೂಡಲೇ ಪ್ರವೇಶಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಹಕ್ಕೊತ್ತಾಯ ಪತ್ರವನ್ನು ಮಂಡಳಿಯ ನಿರ್ದೇಶಕರಿಗೆ ನೀಡಿದರು.
 
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರದ ಎಎಪಿ ಅಧ್ಯಕ್ಷ ಮೋಹನ್‌ ದಾಸರಿ, ಕೋವಿಡ್‌ ಹಾಗೂ ಲಾಕ್‌ಡೌನ್‌ನಿಂದಾಗಿ ಪೋಷಕರು ಆದಾಯವಿಲ್ಲದೇ ಸಂಕಷ್ಟಕ್ಕೆ ಸಿಲುಕಿರುವುದು ಖಾಸಗಿ ಶಾಲೆಗಳಿಗೆ ಕಾಣುತ್ತಿಲ್ಲ. ಶೇ 70% ಮಾತ್ರ ಶುಲ್ಕವನ್ನು ಮಾತ್ರ ಪಡೆಯಬೇಕೆಂಬ ನಿಯಮವನ್ನು ಅವು ಗಾಳಿಗೆ ತೂರಿವೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಗಳಿಂದ ಸುರೇಶ್‌ ಕುಮಾರ್‌ರವರಿಗೆ ಎಷ್ಟು ಕಮಿಷನ್‌ ಬರುತ್ತಿದೆ? ವಿದ್ಯಾರ್ಥಿಗಳು ಹಾಗೂ ಪೋಷಕರ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಸುರೇಶ್‌ ಕುಮಾರ್‌ ಶಿಕ್ಷಣ ಸಚಿವರಾಗಿರುವುದು ರಾಜ್ಯದ ದುರಾದೃಷ್ಟ. ಅಸಮರ್ಥರಾಗಿರುವ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
 
ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್‌ ವಿ. ಸದಂ ಮಾತನಾಡಿ , ವಿದ್ಯಾರ್ಥಿಗಳು ಹಾಗೂ ಪೋಷಕರ ಬದುಕಿನ ಜೊತೆ ಖಾಸಗಿ ಶಾಲೆಗಳು ಚೆಲ್ಲಾಟ ಆಡುತ್ತಿವೆ. ದುಬಾರಿ ಶುಲ್ಕ ಕಟ್ಟಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ನೀಡದೇ ಸತಾಯಿಸುತ್ತಿವೆ. ವಿದ್ಯಾರ್ಥಿಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿಯಿದ್ದರೆ ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳಿಗೆ ನೇರವಾಗಿ ಪ್ರವೇಶಪತ್ರ ವಿತರಿಸಬೇಕು. ಶುಲ್ಕದಂಧೆಯಲ್ಲಿ ತೊಡಗಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವ ಬದಲು ಜಾಣ ಕುರುಡು ಪ್ರದರ್ಶಿಸುತ್ತಿರುವ ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ಕಾರಣಕ್ಕೆ ವಿದ್ಯಾರ್ಥಿಗಳು ಅಥವಾ ಪೋಷಕರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಶಿಕ್ಷಣ ಸಚಿವರೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಎಎಪಿ ಮುಖಂಡರಾದ ಬಿ.ಟಿ.ನಾಗಣ್ಣ, ಸುಮನ್‌ ಪ್ರಶಾಂತ್‌, ಉಷಾ ಮೋಹನ್‌, ಪುಟ್ಟಣ್ಣ ಗೌಡ, ಡಾ. ಸುಹಾಸಿನಿ, ಡಾ. ಸತೀಶ್‌ ಕುಮಾರ್‌ ಮುಂತಾದವರು ಪ್ರತಿಭಟನೆಯಲ್ಲಿ  ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಕಾಸರೋಗೋಡು ತೆಯ್ಯಂ ಹೊಡೆತಕ್ಕೆ ಯುವಕನ ಸ್ಥಿತಿ ಏನಾಯ್ತು: ಭಯಾನಕ ವಿಡಿಯೋ ನೋಡಿ

Karnataka Weather: ವಿಪರೀತ ಚಳಿಯಿಂದ ನಡುಗುತ್ತಿದ್ದರೆ ಇಂದು ಗುಡ್ ನ್ಯೂಸ್

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮುಂದಿನ ಸುದ್ದಿ
Show comments