Webdunia - Bharat's app for daily news and videos

Install App

ರೆಮಲ್ ಚಂಡಮಾರುತದ ಎಫೆಕ್ಟ್‌: ಕೇರಳಕ್ಕೆ ಇಂದೇ ಮುಂಗಾರು ಪ್ರವೇಶ ಸಾಧ್ಯತೆ

sampriya
ಗುರುವಾರ, 30 ಮೇ 2024 (17:51 IST)
Photo By X
ಬೆಂಗಳೂರು: ಕೇರಳ ಮತ್ತು ಈಶಾನ್ಯ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ಗುರುವಾರ ಮುಂಗಾರು ಏಕಕಾಲದಲ್ಲಿ ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರೆಮಲ್ ಚಂಡಮಾರುತ ಪರಿಣಾಮ ನೈಋತ್ಯ ಮುಂಗಾರು ಸ್ವಲ್ಪ ವೇಗವಾಗಿ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಕೇರಳಕ್ಕೆ ಜೂನ್ 1 ರಂದು ಮುಂಗಾರು ಪ್ರವೇಶವಾಗುತ್ತದೆ. ಆದರೆ ಈ ಬಾರಿ ಎರಡು ದಿನಗಳ ಮುಂಚಿತವಾಗಿಯೇ ಪ್ರಾರಂಭವಾಗಿದೆ ಎಂದು ತಿಳಿಸಿದೆ.

ಅರುಣಾಚಲ ಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್​, ಮೇಘಾಲಯ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನಲ್ಲಿ ಸಾಮಾನ್ಯವಾಗಿ ಜೂನ್​ 5ರಂದು ಮುಂಗಾರು ಪ್ರವೇಶಿಸುತ್ತಿತ್ತು. ಆದರೆ ಈ ಬಾರಿ ಬಹುಬೇಗವೇ ಮಳೆ ಶುರುವಾಗಲಿದೆ.

ಏಕಕಾಲಕ್ಕೆ ಕೇರಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು ಪ್ರವೇಶಿಸಲಿದೆ. 2017ರಲ್ಲಿ ಈ ವಿದ್ಯಾಮಾನ ನಡೆದಿತ್ತು. ಮೋರಾ ಚಂಡಮಾರುತದ ಕಾರಣದಿಂದ ಪೂರ್ವ ಕೇಂದ್ರ ಬಂಗಾಳಕೊಲ್ಲಿಯಲ್ಲಿ ಮುಂಗಾರು ಮಾರುತ ರೂಪುಗೊಂಡಿತ್ತು. ಈ ಬಾರಿ ರೆಮಲ್ ಚಂಡಮಾರುತದಿಂದಾಗಿ ಏಕಕಾಲಕ್ಕೆ ಕೇರಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ಕೇರಳಕ್ಕೆ ಹಾಗೂ ಈಶಾನ್ಯ ರಾಜ್ಯಗಳ ಕೆಲ ಪ್ರದೇಶಗಳಿಗೆ ಮುಂಗಾರು ಪ್ರವೇಶಿಸಲು ಮತ್ತು ಮುನ್ನಡೆಯಲು ಅನುಕೂಲಕರ ವಾತಾವರಣ ಇದೆ. ಕಳೆದ ವರ್ಷ ಕೇರಳಕ್ಕೆ ಒಂದು ವಾರ ವಿಳಂಬವಾಗಿ ಮುಂಗಾರು ಪ್ರವೇಶಿಸಿತ್ತು.

ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು  ಪ್ರವೇಶಿಸುವ ಸಾಧ್ಯತೆಗಳಿವೆ. ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments