Webdunia - Bharat's app for daily news and videos

Install App

ಮೇಘಾಲಯ ಹನಿಮೂನ್ ಪ್ರಕರಣದ ಎಫೆಕ್ಟ್‌: ಇನ್ಮುಂದೆ ಪ್ರವಾಸಿಗರಿಗೆ ಹೊಸ ನಿಯಮ ಜಾರಿ

Sampriya
ಮಂಗಳವಾರ, 1 ಜುಲೈ 2025 (15:42 IST)
ಮೇಘಾಲಯ: ಸುರಕ್ಷತೆಗಾಗಿ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಅಧಿಕೃತ ಮತ್ತು ಮಾನ್ಯತೆ ಪಡೆದ ಮಾರ್ಗದರ್ಶಿಗಳನ್ನು ನೇಮಿಸಿಕೊಳ್ಳುವುದನ್ನು ಮೇಘಾಲಯವು ಕಡ್ಡಾಯಗೊಳಿಸಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪ್ರವಾಸೋದ್ಯಮ ಪ್ರಮೋಷನ್ ಸೊಸೈಟಿಯ ಅಧ್ಯಕ್ಷರು ತಿಳಿಸಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನ ಉದ್ಯಮಿಯೊಬ್ಬರು ಮೇಘಾಲಯದಲ್ಲಿ ತಮ್ಮ ಹನಿಮೂನ್ ಸಂದರ್ಭದಲ್ಲಿ ಅವರ ಪತ್ನಿಯಿಂದ ಕೊಲ್ಲಲ್ಪಟ್ಟ ಬಳಿಕ ಈ ನಿರ್ಧಾವರನ್ನು ಕೈಗೊಳ್ಳಲಾಗಿದೆ. 

ಈ ಹತ್ಯೆಯು ಮೇಘಾಲಯದಲ್ಲಿ ಮಾತ್ರವಲ್ಲದೆ ಇಡೀ ಈಶಾನ್ಯದಲ್ಲಿ ಅತಿ ಹೆಚ್ಚು ಪ್ರವಾಸಿಗರನ್ನು ನೋಡುವ ಜಿಲ್ಲೆಯಾದ ಪೂರ್ವ ಖಾಸಿ ಹಿಲ್ಸ್‌ನಲ್ಲಿರುವ ವೈ ಸಾವ್‌ಡಾಂಗ್ ಜಲಪಾತದ ಬಳಿ ನಡೆದಿತ್ತು. 

ಇದೊಂದು ಕೊಲೆ ಪ್ರಕರಣ ಎಂದು ತಿಳಿಯುತ್ತಿದ್ದ ಹಾಗೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತು. ಅದಲ್ಲದೆ ಪ್ರವಾಸಕ್ಕೆ ಮೇಘಾಲಯ ಸುರಕ್ಷಿತವಲ್ಲ ಎಂಬ ಚರ್ಚೆಯೂ ಹುಟ್ಟಿಕೊಂಡಿತು. 

ಇಂದೋರ್ ದಂಪತಿಗಳಾದ ರಾಜಾ ರಘುವಂಶಿ ಮತ್ತು ಸೋನಮ್‌ಗೆ ಸಂಬಂಧಿಸಿದ ಪ್ರಕರಣದ ನಂತರ, ಕೆಲವರು ತಮ್ಮ ಬುಕಿಂಗ್ ಅನ್ನು ರದ್ದುಗೊಳಿಸಿದ್ದಾರೆ ಮತ್ತು ಇನ್ನೂ ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ.

ಅದರ ಬೆನ್ನಲ್ಲೇ ಪ್ರವಾಸಿಗರ ಸುರಕ್ಷತೆಗಾಗಿ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಅಧಿಕೃತ ಮತ್ತು ಮಾನ್ಯತೆ ಪಡೆದ ಮಾರ್ಗದರ್ಶಿಗಳನ್ನು ನೇಮಿಸಿಕೊಳ್ಳುವುದನ್ನು ಮೇಘಾಲಯವು ಕಡ್ಡಾಯಗೊಳಿಸಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

ಹಾಸನದಲ್ಲಿ ಮತ್ತೊಂದು ಹೃದಯಾಘಾತ: ನವವಿವಾಹಿತ ಸಾವು

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

ಮುಂದಿನ ಸುದ್ದಿ
Show comments