ಸಿದ್ದು ಕಾರಿಗೆ ಮೊಟ್ಟೆ ಎಸೆತ - ಸಿಎಂ ಖಂಡನೆ

Webdunia
ಶುಕ್ರವಾರ, 19 ಆಗಸ್ಟ್ 2022 (18:03 IST)
ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು, ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಸೇರಿ ಬಿಜೆಪಿಯ ಹಲವು ನಾಯಕರು ಘಟನೆಯನ್ನು ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘಟನೆಯನ್ನ ಖಂಡಿಸಿದ್ರೆ, ವಿಪಕ್ಷ ನಾಯಕರಿಗೆ ಭದ್ರತೆ ಒದಗಿಸ್ತೀವಿ ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ. ಸಚಿವ ಎಸ್‍.ಟಿ. ಸೋಮಶೇಖರ್ ಮಾತನಾಡಿ, ಅವರೇನು ಮಾತಾಡ್ತಾ ಇದ್ದಾರೆ ಎಂಬುದು ಅವರಿಗೆ ಅರ್ಥ ಆಗ್ತಿಲ್ಲ. ಬರೀ ವಿವಾದಾತ್ಮಕ ಹೇಳಿಕೆಗಳನ್ನೇ ನೀಡ್ತಾರೆ. ಇನ್ಮುಂದಾದ್ರೂ ಅವರು ತೂಕದ ಮಾತಾಡ್ಲಿ ಎಂದು ಚಾಮುಂಡಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಈ ಭಾಗದಲ್ಲಿ ಜುಲೈ 30ರ ವರೆಗೆ ಭಾರೀ ಮಳೆ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕರೇ ಮಾದಕ ಜಾಲದ ಡಾನ್‌ಗಳು, ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ

ಭಾರತವನ್ನು ನೇಪಾಳದಂತೆ ಮಾಡುತ್ತೇವೆ, ಪಾರ್ಲಿಮೆಂಟ್ ಕಿತ್ತಾಕ್ತೇವೆ ಎಂದಿದ್ದ ವ್ಯಕ್ತಿ ಜೊತೆ ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ Video

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು, ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ಮಾರಿ ತಮಿಳುನಾಡಿಗೆ ಉಪಕಾರಿ

ಇದೊಂದು ಲಂಚಪ್ರಿಯ, ಭೂಮಿ ಪ್ರಿಯ ಸರ್ಕಾರ: ಕಾಂಗ್ರೆಸ್ ಗೆ ತಿವಿದ ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments