ಬೆಂಗಳೂರಿನಲ್ಲಿ ಇನ್ಮುಂದೆ ಮೊಟ್ಟೆ ದುಬಾರಿ !

Webdunia
ಗುರುವಾರ, 26 ಜನವರಿ 2023 (14:57 IST)
ಮೊಟ್ಟೆ  ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ, ಬಹುತೇಕರು ಮೊಟ್ಟೆ ತಿನ್ನೋರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು  ನಗರವೊಂದರಲ್ಲೇ ಮೊಟ್ಟೆಯಿಂದ ಕೋಟ್ಯಂತರ ರೂಪಾಯಿ ವಹಿವಾಟು ಪ್ರತಿನಿತ್ಯ ನಡೆಯುತ್ತದೆ. ಅಂತಹದ್ದರಲ್ಲಿ ಮೊಟ್ಟೆಗೂ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿ ಮೊಟ್ಟೆಯ ಬೆಲೆ ಏರಿಕೆಯಾಗಿದ್ದು, ಮೊಟ್ಟೆ ಪ್ರಿಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕೋಳಿಗಳಿಗೆ ನೀಡುವ ಆಹಾರದ ಬೆಲೆ ಏರಿಕೆಯಾದ ಪರಿಣಾಮ ಸಹಜವಾಗಿಯೇ ಮೊಟ್ಟೆಗಳು ದುಬಾರಿ ಎನಿಸಿವೆ. 2021ರ ಜನವರಿಯಲ್ಲಿ 100 ಮೊಟ್ಟೆಗಳ ಒಂದು ಬ್ಯಾಚ್‌ಗೆ 437.06 ರೂಪಾಯಿ ನಿಗದಿಯಾಗಿತ್ತು. ಕಳೆದ ವರ್ಷ ಜನವರಿಯಲ್ಲಿ 100 ಮೊಟ್ಟೆಗಳ ಒಂದು ಬ್ಯಾಚ್‌ಗೆ 437.58 ರೂಪಾಯಿ ಇತ್ತು. ಆದರೆ ಈ ಬಾರಿ 100 ಮೊಟ್ಟೆಗಳ 1 ಬ್ಯಾಚ್‌ಗೆ ಬರೋಬ್ಬರಿ 575 ರೂಪಾಯಿ ಆಗಿದೆ.
ಕೋಳಿಗಳಿಗೆ ನೀಡುವ ಆಹಾರದ ಬೆಲೆ ಏರಿಕೆ ಆದ ಪರಿಣಾಮ ಮೊಟ್ಟೆಯ ಬೆಲೆ ಏರಿಕೆ ಆಗಿರುವುದರಿಂದ ಅತ್ತ ಮೊಟ್ಟೆಯಿಂದ ಮಾಡುವ ಖಾದ್ಯಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಕೂಡ ಇದ್ದು, ಮೊಟ್ಟೆ ರೇಟ್ ಏರಿದ ಪರಿಣಾಮ ಗ್ರಾಹಕರಿಗೆ ನೇರವಾಗಿ ತಟ್ಟಲಿದೆ. ಸದ್ಯ ವ್ಯಾಪಾರಿಗಳಿಗೆ ಒಂದು ಮೊಟ್ಟೆಗೆ 5.75 ರೂಪಾಯಿಯಂತೆ ಹೋಲ್ ಸೇಲ್ ದರ ನಿಗದಿ ಪಡಿಸಲಾಗಿದ್ದು, ಗ್ರಾಹಕರಿಗೆ 7 ರೂಪಾಯಿಂದ 8 ರೂಪಾಯಿಗೆ ಮಾರಾಟ ಮಾಡಲು ಚಿಂತನೆ ನಡೆಸಲಾಗಿದೆ. ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟೆಯ ಬೆಲೆ ಏರಿಕೆ ಆಗಿದ್ದು, ಇದು ಇಲ್ಲಿಗೆ ಮಾತ್ರ ಸೀಮಿತವಾಗಿರದೆ ರಾಜ್ಯದ ಉದ್ದಗಲಕ್ಕೂ ವಿಸ್ತರಿಸುವ ಸಾಧ್ಯತೆ ಹೇರಳವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮೊಟ್ಟೆ ಬ್ಯುಸಿನೆಸ್ ಮಾಡ್ತಿರುವುದರಿಂದ ಒಂದು ಕಡೆ ಉತ್ಪನ್ನವಾದ ಮೊಟ್ಟೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ರಫ್ತಾಗುತ್ತದೆ. ಹೀಗಾಗಿ ಸಹಜವಾಗಿಯೇ ಬೆಂಗಳೂರು ಮಾತ್ರವಲ್ಲದೇ ರಾಜ್ಯದೆಲ್ಲೆಡೆ ಮೊಟ್ಟೆ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಇದರಿಂದ ಜನ ಸಾಮಾನ್ಯರು ಕೈ ಸುಟ್ಟುಕೊಳ್ಳೋದರಲ್ಲಿ ಯಾವುದೇ ಅನುಮಾನವಿಲ್ಲ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments