Webdunia - Bharat's app for daily news and videos

Install App

ಟಿವಿ ಚಾನಲ್ ಬದಲಾಯಿಸಿದ್ದಕ್ಕೆ ಕೊಲೆ

Webdunia
ಮಂಗಳವಾರ, 28 ಜುಲೈ 2015 (09:12 IST)
ಟಿವಿ ನೋಡುತ್ತಿದ್ದ ಅಣ್ಣ ತಮ್ಮಂದಿರಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ದಾರುಣ ಅಂತ್ಯ ಕಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಅಶೋಕನಗರದ ಇ- ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದ್ದು ಮೃತ ದುರ್ದೈವಿಯನ್ನು ಬಾಬು (30) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಸ್ವಾಮಿ(32)  ಗಾರ್ಮೆಂಟ್ ಉದ್ಯೋಗಿಯಾಗಿದ್ದಾನೆ. ಮೃತ ಬಾಬು ಹೂ ಕಟ್ಟುವ ಕೆಲಸ ಮಾಡುತ್ತಿದ್ದ. 
 
ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಸಹೋದರರು ಟಿವಿ ನೋಡುತ್ತಿದ್ದರು  ಈ ಸಂದರ್ಭದಲ್ಲಿ ಬಾಬು ಚಾನೆಲ್ ಬದಲಾಯಿಸಿದ್ದರಿಂದ ಅಣ್ಣ ಸ್ವಾಮಿ ತಕರಾರು ತೆಗೆದ. ಜಗಳ ತಾರಕಕ್ಕೇರಿದಾಗ ಒಡೆದ ಗಾಜಿನಿಂದ ಸ್ವಾಮಿ ಬಾಬುವಿನ ಹೊಟ್ಟೆಗೆ ತಿವಿದಿದ್ದಾನೆ. 
 
ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಮಾರ್ಗ ಮಧ್ಯದಲ್ಲಿಯೇ ಆತ ಕೊನೆಯುಸಿರೆಳೆದಿದ್ದಾನೆ.
 
ಪ್ರಕರಣದ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments