ಯಮುನಾ ನದಿಗೆ ವಿಷ: ಅರವಿಂದ್ ಕೇಜ್ರಿವಾಲ್ ಗೆ ಬಿಗ್ ಚಾಲೆಂಜ್ ಕೊಟ್ಟ ಚುನಾವಣಾ ಆಯೋಗ

Krishnaveni K
ಗುರುವಾರ, 30 ಜನವರಿ 2025 (16:14 IST)
ನವದೆಹಲಿ: ಯಮುನಾ ನದಿಗೆ ಹರ್ಯಾಣದಿಂದ ವಿಷ ಬೆರೆಸಿ ದೆಹಲಿಗೆ ಹರಿಯಬಿಡಲಾಗುತ್ತಿದೆ ಎಂದು ಆರೋಪ ಹೊರಿಸಿದ್ದ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಗೆ ಚುನಾವಣಾ ಆಯೋಗ ಬಿಗ್ ಚಾಲೆಂಜ್ ನೀಡಿದೆ.

ಯಮುನಾ ನದಿಗೆ ಬಿಜೆಪಿ ನಾಯಕರು ಹರ್ಯಾಣದಲ್ಲಿ ವಿಷ ಹಾಕಿ ದೆಹಲಿಗೆ ಕಳುಹಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದರು. ಇದರ ಬಗ್ಗೆ ಪ್ರಧಾನಿ ಮೋದಿ ಕೂಡಾ ಕೆಂಡಾಮಂಡಲರಾಗಿದ್ದು ನಾನೂ ಕೂಡಾ ಇದೇ ನೀರು ಕುಡಿಯುತ್ತೇನೆ. ಯಮುನಾ ನದಿಗೆ ವಿಷ ಬೆರೆಸಲಾಗುತ್ತಿದೆ ಎಂದು ಕೇಜ್ರಿವಾಲ್ ಹರ್ಯಾಣ ಮಾತ್ರವಲ್ಲ, ಇಡೀ ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದಿದ್ದರು.

ಇನ್ನು, ಚುನಾವಣಾ ಆಯೋಗಕ್ಕೂ ಎಎಪಿ ಈ ಬಗ್ಗೆ ದೂರು ನೀಡಿತ್ತು. ಇದರ ಜೊತೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್ ಚುನಾವಣಾ ಆಯೋಗವನ್ನೇ ಟೀಕಿಸಿದ್ದರು. ಇದರ ಬೆನ್ನಲ್ಲೇ ಚುನಾವಣಾ ಆಯೋಗ ಖಡಕ್ ಸವಾಲು ಮುಂದಿಟ್ಟಿದೆ.

ಯಮುನಾ ನದಿಗೆ ವಿಷ ಬೆರೆಸಲಾಗುತ್ತಿದೆ ಎಂದು ಸುಮ್ಮನೇ ಆರೋಪ ಹೊರಿಸಿದರೆ ಸಾಲದು. ಯಮುನಾ ನದಿಗೆ ವಿಷ ಬೆರೆಸಲಾಗುತ್ತಿದೆ ಎಂದು ಜನರಲ್ಲಿ ಭಯ ಹುಟ್ಟಿಸಿದ್ದೀರಿ. ಹರ್ಯಾಣದ ಬಿಜೆಪಿ ಸರ್ಕಾರದ ವಿರುದ್ಧ ಮಾಡಿರುವ ಆರೋಪಕ್ಕೆ ಸಾಕ್ಷ್ಯ ಕೊಡಬೇಕು. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ ಸಾಕ್ಷ್ಯ ಕೊಡಬೇಕು ಎಂದು ಚುನಾವಣಾ ಆಯೋಗ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments