Webdunia - Bharat's app for daily news and videos

Install App

ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್

Webdunia
ಸೋಮವಾರ, 17 ಏಪ್ರಿಲ್ 2023 (10:02 IST)
ಮಡಿಕೇರಿ : ಚುನಾವಣೆ ಮುಗಿಯುವವರೆಗೂ ಕೊಡಗಿನ ಸಮಾರಂಭಗಳಲ್ಲಿ ಮದ್ಯ ಬಳಕೆ ಮಾಡಬಾರದು ಎಂದು ಚುನಾವಣಾ ಆಯೋಗವು ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಕೊಡಗಿನ ಜನರು ಮದ್ಯ ಬಳಕೆ ಮಾಡಲು ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

ಇದೀಗ ಮದ್ಯ ನಿಷೇಧ ನಿರ್ಬಂಧ ಸಡಿಲಿಸಿ ಖಾಸಗಿ ಸಮಾರಂಭಗಳಲ್ಲಿ ಮದ್ಯ ಬಳಕೆ ಮಾಡಲು ಅವಕಾಶ ನೀಡುವಂತೆ ರಾಜ್ಯದ ಎಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ಕೊಟ್ಟಿದ್ದಾರೆ.

ಕೊಡಗಿನಲ್ಲಿ ಮದುವೆ, ನಾಮಕರಣ ಸೇರಿದಂತೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಲು ನಿರ್ಬಂಧ ಹೇರಿದ್ದ ಬಗ್ಗೆ ಚುನಾವಣಾಧಿಕಾರಿಗಳಿಗೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳಿಂದ ದೂರು ಸಲ್ಲಿಸಲಾಗಿತ್ತು. ಅಲ್ಲದೇ ಬಿಜೆಪಿಯಿಂದ ಕಿಲನ್ ಗಣಪತಿ ಎಲ್ಲಾ ಸಂಸ್ಥೆಗಳ ಪರವಾಗಿ ದೂರು ಸಲ್ಲಿಸಿದ್ದರು. ಈ ಹಿನ್ನೆಲೆ ನಿರ್ಬಂಧ ಸಡಿಲಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ರಾಜಕೀಯ ಪಕ್ಷಗಳಿಂದ ಅಥವಾ ರಾಜಕಾರಣಿಗಳಿಂದ ನಡೆಯುವ ಸಭೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಬಾರದು. ಉಳಿದಂತೆ ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಎಂದಿನಂತೆ ಮದ್ಯ ಸರಬರಾಜಿಗೆ ಅನುಮತಿ ನೀಡಬಹುದು ಎಂದು ಚುನಾವಣಾ ಅಯೋಗವು ಆದೇಶ ಹೊರಡಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments